ಶ್ರೀ ಕ್ಷೇತ್ರ ಒಡಿಯೂರು ಶ್ರೀ ಮಾತಾನಂದಮಯೀ ಅವರಿಂದ ಅಕ್ಷತಾ ಅಭಿಯಾನಕ್ಕೆ ಚಾಲನೆ

ಗೋಯಾತ್ರಾ~ಮಹಾಮಂಗಲದ ಯಶಸ್ಸಿಗಾಗಿ ಭಾನುವಾರ ಬೆಳಿಗ್ಗೆ ಮಂಗಳೂರಿನ ಶ್ರೀ ಭಾರತೀ ಮಹಾವಿದ್ಯಾಲಯದ ಶಂಕರಶ್ರೀಯಲ್ಲಿ ಕಾಮಧೇನು ಹವನ ಜರಗಿ ಸಮಾರಂಭದ ಯಶಸ್ಸಿಗೆ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಮಾತಾನಂದಮಯೀ ಶ್ರೀ ಕ್ಷೇತ್ರ ಒಡಿಯೂರು ಅವರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರಗಿತು. ಅವರು ಮಂಗಲೋತ್ಸವದ ಬಗ್ಗೆ ಅನುಗ್ರಹ ನುಡಿಗಳನ್ನಾಡಿ ವಿವಿಧ ಸಾಮಾಜಿಕ ಸಂಘಟನೆಗಳಿಗೆ ಅಭಿಯಾನದ ಕಿಟ್ ಗಳನ್ನು ಅನುಗ್ರಹಿಸಿ ಅಕ್ಷತಾಭಿಯಾನಕ್ಕೆ ಚಾಲನೆ ನೀಡಿದರು.

ಜಾಹೀರಾತು

ಭಾರತೀಯ ಗೋ ತಳಿಗಳ ಸಂರಕ್ಷಣೆಗಾಗಿ ಆಂದೋಲನದ ರೂಪದಲ್ಲಿ ಮಂಗಲಗೋಯಾತ್ರೆ  ಸಪ್ತ ರಾಜ್ಯಗಳಲ್ಲಿ ನಡೆಯುತ್ತಿದೆ. ಗೋಯಾತ್ರಾ ಮಹಾಮಂಗಲ ಕಾರ್ಯಕ್ರಮ ಕೂಳೂರು ಮೈದಾನದಲ್ಲಿ ಜನವರಿ 27, 28, 29, 2017ರಂದು ನಡೆಯಲಿದೆ. 2000 ಸಂತರು ಮತ್ತು 2 ಲಕ್ಷ ಜನರು ಭಾಗವಹಿಸಲಿರುವ ಈ ಮಹಾಮಂಗಲೋತ್ಸವಕ್ಕೆ ಮಂಗಳೂರಿನ  80000ಕ್ಕೂ ಹೆಚ್ಚಿನ ಮನೆಗಳಿಗೆ ಅಕ್ಷತೆಯೊಂದಿಗೆ ಆಮಂತ್ರಣ ನೀಡುವ ಮಹತ್ಕಾರ್ಯ ಮಾತೃ ವೃಂದದ ನೇತೃತ್ವದಲ್ಲಿ ಜರಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಅಧ್ಯಕ್ಷೆ ಕೆ. ಟಿ.ಶೈಲಜಾ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಾ ಪ್ರಶಾಂತ ಪೈ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಸಮತಾ ಮಹಿಳಾ ಬಳಗದ ಅಧ್ಯಕ್ಷೆ ರಾಜಶ್ರೀ ಆಚಾರ್ ಅವರು ಸಭೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮಹಾ ಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು ಸಮಾರಂಭದ ಸಮಗ್ರ ಮಾಹಿತಿಗಳನ್ನಿತ್ತರು. ವೀಣಾ ಗಣೇಶ ಪ್ರಸಾದ್, ಲಕ್ಷ್ಮಿ ಪ್ರಕಾಶ್ ಪ್ರಾರ್ಥನೆ ಮಾಡಿದರು. ಜಯಲಕ್ಷ್ಮಿ ಕುಕ್ಕಿಲ ಸ್ವಾಗತ ಮತ್ತು  ಲೀಲಾವತಿ ರಾಘವೇಂದ್ರ ಧನ್ಯವಾದವಿತ್ತರು. ಸುಮಾ ರಮೇಶ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀ ಕ್ಷೇತ್ರ ಒಡಿಯೂರು ಶ್ರೀ ಮಾತಾನಂದಮಯೀ ಅವರಿಂದ ಅಕ್ಷತಾ ಅಭಿಯಾನಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*