ವಿಟ್ಲ

ಸಾಲೆತ್ತೂರಿನಲ್ಲಿ ಜಾಗೃತಿ ಸಮಾವೇಶ

ದೇಶದ ಹಿತ ದೃಷ್ಠಿಯಿಂದ ನಡೆಯುವ ಬದಲಾವಣೆಯನ್ನು ತಾಳಿಕೊಳ್ಳಬೇಕು ಎಂದು ಉಡುಪಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.

ಸಾಲೆತ್ತೂರಿನಲ್ಲಿ ಕೊಳ್ನಾಡು – ಸಾಲೆತ್ತೂರು ಹಿಂದು ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಭಾರತರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 125 ನೇ ವರ್ಷಾಚರಣೆ ಅಂಗವಾಗಿ ನಡೆದ ಜಾಗೃತಿ ಸಮಾವೇಶದಲ್ಲಿ ಆಶಿರ್ವಚನ ಮಾಡಿದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶಿರ್ವಚನ ನೀಡಿ ಯುವ ಶಕ್ತಿ ಸಂಸ್ಕಾರಗೊಂಡು ನಮ್ಮನ್ನು ನಾವೇ ಕಾಪಾಡಿಕೊಳ್ಳುವಂತಾಗ ಬೇಕು ಎಂದರು.

ಜಾಹೀರಾತು

ಗುರುಪುರ ವಜ್ರದೇಹಿ ಮಠದ ಶ್ರೀ ರಾಶೇಖರಾನಂದ ಸ್ವಾಮೀಜಿ ಆಶೀರ್ವಚನ ಮಾಡಿ ಮತಾಂತರ, ಗೋಹತ್ಯೆ, ಉಗ್ರಗಾಮಿ ಚಟುವಟಿಕೆಗೆ ಬ್ರೇಕ್ ಬಿದ್ದಿದೆ. ಹಿಂದು ಸಮಾಜದಲ್ಲಿ ನಿರಂತರ ಜಾಗೃತಿ ಯಾಗಬೇಕು ಎಂದರು.

ಕನ್ಯಾನ ಬಾಳೆಕೋಡಿ ಕ್ಷೇತ್ರದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಆಶಿರ್ವಚನ ನೀಡಿ ಹೃದಯ ವೈಶಾಲ್ಯತೆಯಿಂದ ಹಿಂದು ಸಮಾಜ ಒಟ್ಟಾಗಬೇಕು. ಏಕ ಸೂತ್ರದಲ್ಲಿ, ಹಿಂದುತ್ವದ ಆದಾರದಲ್ಲಿ  ಸಮಾಜ ಸಂಘಟನೆಗೊಂಡು ಸಶಕ್ತವಾದಾಗ ಭಾರತ ಜಗದ್ವಂದ್ಯವಾಗುವುದು ಎಂದು ತಿಳಿಸಿದರು.

ಯುವ ಬ್ರಿಗೇಡ್ ನ ರಾಜ್ಯ ಸಂಚಾಲಕ ನಿತ್ಯಾನಂದ ವಿವೇಕ ವಂಶಿ ಮುಖ್ಯ ಭಾಷಣ ಮಾಡಿದರು. ಅಧ್ಯಕ್ಷತೆಯನ್ನು ಪ್ರಗತಿ ಪರ ಕೃಷಿಕ ರಾಜೇಶ್ ನಾಕ್ ಉಳಿಪಾಡಿಗುತ್ತು ವಹಿಸಿದ್ದರು.

ಮಾಜಿ ಸೈನಿಕರಾದ ವಿಠಲ ಶೆಟ್ಟಿ ಅಗರಿ, ಗೋಪಾಲಕೃಷ್ಣ ಭಟ್, ರಂಗನಾಥ ರೈ, ಎಸ್, ಉದಯ ಕುಮಾರ್ ರಾವ್ ಲಿಂಗಪ್ಪ ಗೌಡ ಸೆರ್ಕಳ ಅವರನ್ನು ಸನ್ಮಾನಿಸಲಾಯಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದ ಸುಪ್ರೀತಾ ಪೂಜಾರಿ ಅವರನ್ನು ಗೌರವಿಸಲಾಯಿತು.  ಸಮಾಜ ಸೇವಕ ದಾಮೋದರ ರೈ ಬಾರೆ ಬೆಟ್ಟು ಅವರನ್ನು ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೆರ್ಡೂರು ಮೇಳದ ಭಾಗವತ ರಾಘವೇಂದ್ರ ಅವರನ್ನು ಗೌರವಿಸಲಾಯಿತು.

ಧರ್ಮ ಜಾಗೃತಿ ಪ್ರಮುಖ ಅರುಣ ಕುಮಾರ್ ಪುತ್ತಿಲ, ರತ್ನಾಕರ ಶೆಟ್ಟಿ, ಉದ್ಯಮಿ ಜನಾರ್ದನ ಅರ್ಕುಳ, ವಿಕಾಸ ಕುಮಾರ್, ಸೂರಪ್ಪ ಕಾಡುಮಠ, ಧರ್ಮಸ್ಥಳ ಯೋಜನೆಯ ನವೀನ ಶೆಟ್ಟಿ ಭಾಗವಹಿಸಿದ್ದರು.

ಸುಪ್ರೀತಾ, ಸುಷ್ಮಿತಾ ಪ್ರಾರ್ಥನೆ ಹಾಡಿದರು. ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಸೆರ್ಕಳ ಸ್ವಾಗತಿಸಿದರು. ಸಂಚಾಲಕ ರಮೇಶ ಶೆಟ್ಟಿ ನಂದ್ರಬೈಲು ಪ್ರಾಸ್ತಾವಿಸಿದರು. ರೋಹಿತ್ ಅಗರಿ ವಂದಿಸಿದರು. ವಿಜಯಾ ಶೆಟ್ಟಿ ಸಾಲೆತ್ತೂರು ಸನ್ಮಾನ ಪತ್ರ ವಾಚಿಸಿದರು. ರಾಜ್ಯೊತ್ಸವ ಪ್ರಶಸ್ತಿ ವಿಜೇತ ದಯಾನಂದ ಕತ್ತಲ್ ಸಾರ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

39 minutes ago