ಇನ್ನು ಪ್ರತಿ ವರ್ಷವೂ ತಾಲೂಕು ಮಟ್ಟದಲ್ಲಿ ಅದ್ದೂರಿ ಕರಾವಳಿ ಉತ್ಸವ

pics: Kishore peraje

bantwalnews.com report

ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ಸೋಮವಾರ ರಾತ್ರಿ ನಡೆಯಿತು.

ಜಾಹೀರಾತು

ಸಾಂಸ್ಕೃತಿಕ ಕಾರ್ಯಕ್ರಮಗಳಾದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಇನ್ನು ಮುಂದೆ ಪ್ರತಿ ವರ್ಷ ತಾಲೂಕು ಮಟ್ಟದ ಉತ್ಸವ ನಡೆಸುವುದಾಗಿ ಘೋಷಿಸಿದರು. ಈ ಸಂದರ್ಭ ಹೆಬ್ಬಾವಿನೊಡನೆ ಸೆಣಸಿದ ಬಾಲಕ ವೈಶಾಖ್ ನನ್ನು ಸನ್ಮಾನಿಸಲಾಯಿತು.

ಜಾಹೀರಾತು

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರವಿ, ಸಹಾಯಕ ತಹಸೀಲ್ದಾರ್ ಡಾ.ರೇಣುಕಾ ಪ್ರಸಾದ್, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಜಿಪಂ ಸದಸ್ಯ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮೆಸ್ಕಾಂ ನಿರ್ದೇಶಕಿ ಮಲ್ಲಿಕಾ ಪಕ್ಕಳ, ಗೇರು ಅಭಿವೃದ್ಧಿ ನಿಗಮ ಸದಸ್ಯ ಜಗದೀಶ ಕೊಯ್ಲ, ಮಾಜಿ ಪುರಸಭಾಧ್ಯಕ್ಷ ಸದಾನಂದ ಮಲ್ಲಿ, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ತಹಸೀಲ್ದಾರ್ ಪುರಂದರ ಹೆಗ್ಡೆ, ಕಸಾಪ ಅಧ್ಯಕ್ಷ ಮೋಹನ ರಾವ್, ಪುರಸಭಾ ಮುಖ್ಯಾಧಿಕಾರಿ ಕೆ.ಸುಧಾಕರ್ ವೇದಿಕೆಯಲ್ಲಿ ಇದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯರಾದ ಮಮತಾ ಗಟ್ಟಿ, ರವೀಂದ್ರ ಕಂಬಳಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಶಿಕ್ಷಣಾಧಿಕಾರಿ ಲೋಕೇಶ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣ ಭಟ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು. ಕಲಾವಿದ ಮಂಜು ವಿಟ್ಲ ನಿರೂಪಿಸಿದರು.

ಮೆರವಣಿಗೆ ಮುಗಿದಾಕ್ಷಣ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಂಟ್ವಾಳ ಎಸ್‌ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಮಕ್ಕಳ ವೀರ ಸೈನಿಕರ ನೃತ್ಯಪ್ರದರ್ಶನಕ್ಕೆ ಇಡೀ ಸಭಾಂಗಣದ ಪ್ರೇಕ್ಷಕರೇ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದ ದೃಶ್ಯ ವಿಶೇಷ ಗಮನ ಸೆಳೆಯಿತು.

ಜಾಹೀರಾತು

ವಿವಿಧ ಶಾಲಾ ಮಕ್ಕಳ ನೃತ್ಯ ಪ್ರದರ್ಶನ ಒಂದಕ್ಕೊಂದನ್ನು ಮೀರಿಸುವ ರೀತಿಯಲ್ಲಿ ಪ್ರದರ್ಶನಗೊಂಡು ಸಭಿಕರ ಪ್ರಶಂಸೆಗೊಳಪಟ್ಟಿತು. ಈ ನಡುವೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಗಂಧದಗುಡಿ ಚಲನಚಿತ್ರದ ಹಾಡು ಹಾಗೂ ಬಂಟ್ವಾಳ ತಾಲೂಕು ಚುನಾವಣಾ ಶಾಖೆಯ ಪ್ರಥಮ ದರ್ಜೆಯ ಸಹಾಯಕ ಸಿಬ್ಬಂದಿ ಗೋಪಾಲ್‌ರವರ ವಿವಿಧ ಭಾಗವತರ ಧ್ವನಿಯ ಯಕ್ಷಗಾನದ ಹಾಡಿನ ತುಣುಕನ್ನು ಹಾಡುವ ಮೂಲಕ ತಾವೇನು ಕಮ್ಮಿ ಇಲ್ಲ ಎಂಬುದುನ್ನು ತೋರಿಸಿಕೊಟ್ಟರು. ಜಾನಪದ ನೃತ್ಯ, ಭರತನಾಟ್ಯ, ಶಂಭೂರು ದಿ| ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಕೋಟಿ ಚೆನ್ನಯ ನಾಟಕ ಮೆಚ್ಚುಗೆಗಳಿಸಿತು. ಪಟ್ಟಾಭಿರಾಮಸುಳ್ಯ ಮತ್ತು ತಂಡದ ಮಿಮಿಕ್ರಿ ಮತ್ತು ಬಲೆ ತೆಲಿಪಾಲೆ ಖ್ಯಾತಿಯ ಅರುಣ್‌ಚಂದ್ರ ಮತ್ತು ಬಳಗದವರಿಂದ ಹಾಸ್ಯ ತುಣುಕುಗಳು ಪ್ರದರ್ಶನಗೊಂಡವು.

ಜಾಹೀರಾತು

ಜಾಹೀರಾತು

ಕೊಂಬು, ಶಾಲಾ ಮಕ್ಕಳ ಬ್ಯಾಂಡ್ ಸೆಟ್, ಸ್ಕೌಟ್ ಗೈಡ್, ಚೆಂಡೆ, ಕಂಬಳದ ಓಟದ ಕೋಣ, ನಂದಿ ಧ್ವಜ, ಬಣ್ಣದ ಕೊಡೆ, ಚಿಲಿಪಿಲಿಗೊಂಬೆ ಬಳಗ, ಯಕ್ಷಗಾನ ಗೊಂಬೆ, ಶಾರ್ದೂಲ, ಕೀಲು ಕುದುರೆ, ಕರಗ ನೃತ್ಯ, ದಫ್ ಹಾಡು ಮೆರವಣಿಗೆಗೆ ವಿಶೇಷ ಮೆರುಗು ನೀಡಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇನ್ನು ಪ್ರತಿ ವರ್ಷವೂ ತಾಲೂಕು ಮಟ್ಟದಲ್ಲಿ ಅದ್ದೂರಿ ಕರಾವಳಿ ಉತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*