ಬಂಟ್ವಾಳ

ಸಜಿಪಮೂಡ ಗ್ರಾಮಸಭೆಯಲ್ಲಿ ಮಾತಿನ ಚಕಮಕಿ, ಗ್ರಾಮಸ್ಥರ ಧರಣಿ

ಸಜಿಪಮೂಡ ಗ್ರಾಮಸಭೆಯಲ್ಲಿ ತಾಪಂ ಸದಸ್ಯರಾಡಿದ ಮಾತಿಗೆ ಕ್ಷಮೆ ಕೋರಲು ಒತ್ತಾಯಿಸಿ, ಬಿಜೆಪಿ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಪಂ ಕಚೇರಿಯೊಳಗೆ ಪ್ರತಿಭಟನೆ ನಡೆಸಿದರು.

ಮಂಗಳವಾರ ಗ್ರಾಮಸಭೆ ಗಣಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದಿದ್ದು, ವಿಷಯವೊಂದಕ್ಕೆ ಸಂಬಂಧಿಸಿ ಚರ್ಚೆ ನಡೆದಾಗ ತಾಪಂ ಸದಸ್ಯ ಸಂಜೀವ ಪೂಜಾರಿ ತನ್ನ ಕುರಿತು ಆಡಿತ ಮಾತಿಗೆ ಕ್ಷಮೆ ಕೋರಬೇಕು ಎಂದು ಅಯ್ಯಪ್ಪ ವ್ರತಧಾರಿಯೂ ಆಗಿರುವ ಗ್ರಾಮಸ್ಥ ಸತೀಶ್ ಪೂಜಾರಿ ಒತ್ತಾಯಿಸಿದರು. ಅವರನ್ನು ಬೆಂಬಲಿಸಿ, ಗ್ರಾಮಸ್ಥರಿಂದ ಸ್ಥಳದಲ್ಲೇ ಧರಣಿ ನಡೆಯಿತು. ಅವರ ಬೆಂಬಲಕ್ಕೆ ಆಗಮಿಸಿದ ಮಾಜಿ ತಾ.ಪಂ. ಅಧ್ಯಕ್ಷ ಯಶವಂತ ಡಿ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಬಿಜೆಪಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಪ್ರತಿಭಟನೆಗೆ ಸಾಥ್ ನೀಡಿದರು. ಸುದ್ದಿ ತಿಳಿದ  ಬಂಟ್ವಾಳ ನಗರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಈ ಕುರಿತು ಸತೀಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ