ವಿಟ್ಲ

ನಡುರಸ್ತೆಯಲ್ಲೇ ಬಸ್, ಆಟೋ ಚಾಲಕರ ತಕರಾರು

ಬಸ್ ಹಾಗೂ ರಿಕ್ಷಾ ಚಾಲಕರಿಬ್ಬರು ಪ್ರಾಯಾಣಿಕರನ್ನು ಹತ್ತಿಸುವ ವಿಚಾರದಲ್ಲಿ ನಡುರಸ್ತೆಯಲ್ಲಿ ವಾಹನ ನಿಲ್ಲಿಸಿಕೊಂಡು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಸಂಚಾರಕ್ಕೆ ತೊಂದರೆ ಮಾಡಿದ ಬಗ್ಗೆ ವಿಟ್ಲ ಪೊಲೀಸರು ನೋಟೀಸ್ ನೀಡಿ ವಶಕ್ಕೆ ಪಡೆದ ಘಟನೆ ವಿಟ್ಲ – ಸಾಲೆತ್ತೂರು ರಸ್ತೆಯಲ್ಲಿ ನಡೆದಿದೆ.

ವಿಟ್ಲದಿಂದ ಸಾಲೆತ್ತೂರು ಕಡೆಗೆ ಹೋಗುವ ರಸ್ತೆಯಲ್ಲಿ ಖಾಸಗೀ ಬಸ್ ನಿಲ್ಲಿಸಿ ಜನರನ್ನು ಹತ್ತಿಸಿಕೊಳ್ಳುತ್ತಿತ್ತು. ಇದೇ ಸಮಯಕ್ಕೆ ಹಿಂಬದಿಯಲ್ಲಿದ್ದ ರಿಕ್ಷಾ ಚಾಲಕ ಬಸ್ ಸಾಗುವ ಕಡೆಯ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ. ಇದು ಮಾತಿನ ಚಕಮಕಿಗೆ ಕಾರಣವಾಯಿತು.

ವಿಷಯ ತಿಳಿದ ವಿಟ್ಲ ಪೊಲೀಸರು ವಾಹನ ಸಹಿತ ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ. ಬೇರೆ ವಾಹನಗಳಿಗೆ ಸಂಚಾರಕ್ಕೆ ತೊಂದರೆ ಮಾಡಿದ ಎರಡು ವಾಹನದ ಮೇಲೆ ನೋಟೀಸ್ ಜಾರಿಗೊಳಿಸಿದ್ದಾರೆ.

ಜಾಹೀರಾತು

ವಿಟ್ಲ ಉಪನಿರೀಕ್ಷಕ ನಾಗರಾಜ್ ಅವರು ಎರಡೂ ವಾಹನಕ್ಕೆ ನೋಟೀಸ್ ಜಾರಿ ಮಾಡಿದ್ದರಿಂದ ಎರಡೂ ವಾಹನಗಳನ್ನು ದಂಡ ಕಟ್ಟಿ ಬಿಡಿಸಬೇಕಾಯಿತು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ