ಜಿಲ್ಲಾಧಿಕಾರಿ ಅಂದು ಹೇಳಿದ್ದು ಕಾರ್ಯಗತವಾಗುತ್ತಾ?

ಒಂದು ವಾರದೊಳಗೆ ಕೆಲಸ ಮಾಡಿ…ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ನವೆಂಬರ್ ತಿಂಗಳಲ್ಲಿ ಬಂಟ್ವಾಳ ಪುರಸಭೆಯಲ್ಲಿ ಕರೆದ ಮೀಟಿಂಗ್ ನಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಾ ಹೇಳುತ್ತಿದ್ದುದು ಇದು.

ಬಂಟ್ವಾಳ ರಸ್ತೆ ಅಗಲಗೊಳಿಸುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ, ವಾರದೊಳಗೆ ನನಗೆ ರಿಪೋರ್ಟ್ ನೀಡಿ, ಬಿ.ಸಿ.ರೋಡ್ ಪಾರ್ಕಿಂಗ್ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ, ವಾರದೊಳಗೆ ರಿಪೋರ್ಟ್ ನೀಡಿ….

ಜಾಹೀರಾತು

ಹೀಗೆ ನವೆಂಬರ್ ತಿಂಗಳ ಆರಂಭದಲ್ಲಿ ಕರೆದ ಮೀಟಿಂಗ್ ನಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದು ಕಾರ್ಯಗತವಾಗದಿದ್ದಾಗ ಅಧಿಕಾರಿಗಳಿಗೆ ನೀಡುತ್ತಿದ್ದ ಸೂಚನೆ ಪರಿ ಇದು.

ಆದರೆ ಮೂರು ವಾರಗಳು ಕಳೆದವು. ಕೆಲಸ ಏನಾಯಿತು?

ಒಂದೂವರೆ ತಿಂಗಳ ಹಿಂದೆ ಆರಂಭಗೊಂಡ ಬಂಟ್ವಾಳ ಪುರಸಭಾ ವ್ಯಾಪ್ತಿಯ ಅವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ.

ಈಗಾಗಲೇ ಬಂಟ್ವಾಳ ಪೇಟೆ ಅಗಲಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿ ಇಂಜಿನಿಯರುಗಳು ಕಾರ್ಯಪ್ರವೃತ್ತರಾಗಿದ್ದರೆ, ಬಿ.ಸಿ.ರೋಡಿನ ಕೈಕಂಬದಲ್ಲಿರುವ ಬಸ್ ಬೇ ಆರಂಭದಲ್ಲಿ ಭಾರೀ ವೇಗದಲ್ಲಿ ಸಾಗಿದ್ದರೂ ಬಳಿಕ ಇಲಾಖೆಗಳ ಹೊಂದಾಣಿಕೆ ಕೊರತೆಯಿಂದಾಗಿ ಅರ್ಧಕ್ಕೆ ನಿಂತಿತ್ತು. ಕಳೆದ ವಾದ ಕೈಕಂಬದಲ್ಲಿ ಈ ಕುರಿತು ನಾಗರಿಕರು ಪ್ರತಿಭಟನೆ ನಡೆಸಿ ಆಡಳಿತವನ್ನು ಎಚ್ಚರಿಸಿದರು. ಬಿ.ಸಿ.ರೋಡಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಕೈಕುಂಜೆ ರಸ್ತೆಯಲ್ಲಿ ಮಾರ್ಕಿಂಗ್ ಮಾಡಲಾಗಿದ್ದು, ಮುಂದಿನ ಹಂತದ ಪ್ರಕ್ರಿಯೆಗಾಗಿ ಜಿಲ್ಲಾಡಳಿತದ ಅನುಮತಿಯನ್ನು ಕೋರಲಾಗಿದೆ.

ಬಿ.ಸಿ.ರೋಡಿನ ಕೆಲವೆಡೆ ಶುಕ್ರವಾರವೂ ರಾ.ಹೆ.ಪ್ರಾಧಿಕಾರ ಎಂಜಿನಿಯರ್ ಅಜಿತ್, ಸರ್ವೇಯರುಗಳಾದ ಯಶವಂತ, ಲೋಹಿತ್, ಕಂದಾಯ, ಪುರಸಭೆ ಇಲಾಖೆ ಸಿಬ್ಬಂದಿಗಳಾದ ಯೋಗಾನಂಧ, ಶಿವ ನಾಯ್ಕ, ಪುರುಷೋತ್ತಮ, ಸದಾಶಿವ ಕೈಕಂಬ ಮೊದಲಾದವರು ಅಳತೆ, ಗುರುತು ಮಾಡುವ ಕಾರ್ಯವನ್ನು ನಡೆಸಿದ್ದಾರೆ.

 

ಅಭಿವೃದ್ಧಿ ಸಂದರ್ಭ ಕೆಲ ಸಮಸ್ಯೆಗಳು ಉಂಟಾಗುವುದು ಸಹಜ. ಎಲ್ಲರನ್ನೂ ಸಮಾಧಾನಿಸಿ, ಒಗ್ಗೂಡಿಸಿ ಕಾರ್ಯಗತಗೊಳಿಸುವ ಸವಾಲು ಅಧಿಕಾರಿಗಳ ಕೈಯಲ್ಲಿದೆ. ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರೂ ಇದರಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈಗ ಬಿ.ಸಿ.ರೋಡಿನ ಜನರಲ್ಲಿ ಒಂದು ಸಂದೇಹ. ಜಿಲ್ಲಾಧಿಕಾರಿ ಅಂದು ಹೇಳಿದ್ದು ಕಾರ್ಯಗತವಾಗುತ್ತಾ?

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜಿಲ್ಲಾಧಿಕಾರಿ ಅಂದು ಹೇಳಿದ್ದು ಕಾರ್ಯಗತವಾಗುತ್ತಾ?"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*