ಮದುವೆ ನೋಂದಣಿ ಅರ್ಜಿ ಸಲ್ಲಿಕೆ ಸಂದರ್ಭ ಬಿಗುವಿನ ವಾತಾವರಣ

ಹುಡುಗನ ಊರು ಬಡಗಕಜೆಕಾರು. ಹುಡುಗಿ ಮಡಿಕೇರಿಯವಳು. ಇಬ್ಬರೂ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದರು.

ಇದಕ್ಕೆ ಅವರು ಆಯ್ದುಕೊಂಡದ್ದು ಬಂಟ್ವಾಳ ಉಪನೋಂದಣಿ ಕಚೇರಿ.

ಜಾಹೀರಾತು

ಎಲ್ಲ ಅಂದುಕೊಂಡಂತೆ ನಡೆದಿದ್ದರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಮರಳುತ್ತಿದ್ದರು. ಆದರೆ ಹಾಗಾಗಲಿಲ್ಲ. ಕಾರಣ ಇಬ್ಬರ ಧರ್ಮವೂ ಬೇರೆಯಾಗಿತ್ತು.

ಹೀಗಾಗಿ ಈ ಮದುವೆ ಕಾರ್ಯಕ್ರಮ ಮೊದಲ ಘಟ್ಟದಲ್ಲೇ ಜೋಡಿಗೆ ಅಡ್ಡಿ ಉಂಟಾಯಿತು. ಸಂಘಟನೆಯೊಂದರ ಕಾರ್ಯಕರ್ತರು ಸಬ್ ರಿಜಿಸ್ಟ್ರಾರ್ ಕಚೇರಿ ಸುತ್ತ ಜಮಾಯಿಸತೊಡಗಿದಾಗ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಸುದ್ದಿ ಹರಡಲು ಸಮಯ ಬೇಕಾಗಿರಲಿಲ್ಲ.

ಜಾಹೀರಾತು

ಪರಿಸ್ಥಿತಿ ಬದಲಾಗುವ ಲಕ್ಷಣ ತೋರುತ್ತಿದ್ದಂತೆ ಯುವಕ ಸ್ಥಳದಿಂದ ತೆರಳಿದ. ಯುವತಿ ನೋಂದಣಿ ಕಚೇರಿಯೊಳಗೆ ಬಾಕಿಯಾದಳು.

ಈ ಸಂದರ್ಭ ಬಂಟ್ವಾಳ ಪೊಲೀಸರು ಆಗಮಿಸಿದರು. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾಧಿಕಾರಿ ನಂದ ಕುಮಾರ್, ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ ಬಂದೋಬಸ್ತ್ ಒದಗಿಸಿದರು.

ಆತಂಕದ ವಿಚಾರ ತಿಳಿದ ಯುವತಿಯ ಸಹೋದರ ಬಿ.ಸಿ.ರೋಡಿಗೆ ಆಗಮಿಸಿದರು. ಪೊಲೀಸರ ಜೊತೆ ಮಾತುಕತೆಯೂ ನಡೆಯಿತು. ತನ್ನ ಸಹೋದರಿ ಮತ್ತು  ಯುವಕ ಪರಸ್ಪರ ಇಷ್ಟಪಟ್ಟಿದ್ದಾರೆ, ಮನೆಮಂದಿಯ ಒಪ್ಪಿಗೆಯೂ ಇದೆ ಈ ಹಿನ್ನೆಲೆಯಲ್ಲಿ ಯುವಕನ ಜೊತೆಗೇ ತನ್ನ ಸಹೋದರಿಯನ್ನು ಮದುವೆ ಮಾಡುವುದಾಗಿ ಯುವತಿ ಸಹೋದರನೇ ಪೊಲೀಸರಿಗೆ ತಿಳಿಸಿದರು. ಹೀಗಾಗಿ ನೋಂದಣಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಯುವತಿ ಹಾಗೂ ಆಕೆಯ ಸಹೋದರ ಖಾಸಗಿ ಕಾರಿನಲ್ಲಿ ಮಡಿಕೇರಿಯತ್ತ ಪಯಣಿಸಿದರು. ಬಂಟ್ವಾಳ ನಗರ  ಹಾಗೂ ಗ್ರಾಮಾಂತರ ಪೊಲೀಸರು ರಕ್ಷಣೆ ಒದಗಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮದುವೆ ನೋಂದಣಿ ಅರ್ಜಿ ಸಲ್ಲಿಕೆ ಸಂದರ್ಭ ಬಿಗುವಿನ ವಾತಾವರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*