ಬಂಟ್ವಾಳ

ಕೃಷಿಕರನ್ನು ಮುಗಿಸಲು ಹೊರಟಿರುವ ಆಡಳಿತ: ರಾಜೇಶ್ ನಾಯ್ಕ್

ಬಂಟ್ವಾಳ: ತುಂಬೆ ಅಣೆಕಟ್ಟುವಿಗೆ ಸಂಬಂಧಿಸಿ ಕೃಷಿಕರನ್ನು ಪೂರ್ಣವಾಗಿ ಕತ್ತಲಲ್ಲಿಟ್ಟು ಮೋಸ ಮಾಡಲಾಗಿದೆ. ಜಿಲ್ಲಾಡಳಿತ ಹಾಗೂ ಮನಪಾ ನೀತಿ ಖಂಡನೀಯ ಎಂದು ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬ್ಬರನ್ನು ಕೊಂದು ಮತ್ತೊಬ್ಬರಿಗೆ ಲಾಭ ಮಾಡಿಕೊಡುವುದಲ್ಲ. ಮುಳುಗಡೆ ಪ್ರದೇಶದ ಸಂತ್ರಸ್ತ ರೈತರಿಗೆ ಮಾಹಿತಿ ನೀಡದೆ ಐದೂವರೆ ಅಡಿ ನೀರು ಸಂಗ್ರಹ ಸರಿಯಲ್ಲ. ಕೃಷಿಕರು ಬಹಳಷ್ಟು ಕಷ್ಟಪಟ್ಟು ಬೆಳೆ ಬೆಳೆಸಿ ಜೀವಿಸುತ್ತಿದ್ದಾರೆ. ರೈತರಿಗೆ ಮಾಹಿತಿ ಕೊಡಲಿ, ಮುಳುಗಡೆ ಪ್ರದೇಶದ ರೈತರಿಗೆ ಏಕಗಂಟಿನಲ್ಲಿ ಪರಿಹಾರ ನೀಡಬೇಕು ಎಂದರು. ಜನವರಿಯಿಂದ ನದಿ ತೀರದ ಕೃಷಿಕರು ನೀರು ತೆಗೆಯದಂತೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಹೊರಡಿಸಿದ್ದು, ರೈತರ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತ ರೈತರನ್ನು ಮುಗಿಸುವತ್ತ ಹೊರಟಿದೆ ಎಂದು ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಈ ಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದರು.

ಜಾಹೀರಾತು

18ರಂದು ಯಡಿಯೂರಪ್ಪ ಭೇಟಿ

ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ವಿಚಾರದ ಬಗ್ಗೆ ಮಾತುಕತೆ ನಡೆಸಲಾಗಿದೆ. ಜನವರಿ 18ರಂದು ಅವರು ಜಿಲ್ಲೆಗೆ ಆಗಮಿಸಲಿದ್ದು ಅಂದು ಈ ಭಾಗದ ಸಂತ್ರಸ್ತ ರೈತರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಹಾಗೂ ಸ್ಥಳ ಪರಿಶೀಲನೆಯನ್ನೂ ನಡೆಸಲಿದ್ದಾರೆ. ಬಳಿಕ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಜಾಹೀರಾತು

 

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ