ಜ.26ರ ಬಳಿಕ ಉಗ್ರ ಹೋರಾಟ: ನಳಿನ್

ಬೇಡಿಕೆಗಳಿಗೆ ಮನ್ನಣೆ ದೊರೆಯದೇ ಇದ್ದಲ್ಲಿ ಜ.26ರ ಬಳಿಕ ಉಗ್ರಸ್ವರೂಪದ ಹೋರಾಟಕ್ಕೆ ನಿರ್ಧರಿಸಲಾಗಿದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಬಂಟ್ವಾಳ ಸಮೀಪ ದಡ್ಡಲಕಾಡು ಎಂಬಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಜ್ಞರ ತಂಡ ರಚಿಸಿ, ಎತ್ತಿನ ಹೊಳೆ ಯೋಜನೆ ಕುರಿತ ಸಾಧಕಬಾಧಕಗಳನ್ನು ಅಧ್ಯಯನ ಮಾಡಲಿ, ದ.ಕ.ಜಿಲ್ಲೆಗೆ ಸಮಸ್ಯೆಯಾಗದು ಎಂದಿದ್ದರೆ ಜಾರಿಗೊಳಿಸಲಿ ಅಷ್ಟರವರೆಗೆ  ಕಾಮಗಾರಿ ನಿಲ್ಲಿಸಲಿ ಎಂಬುದು ನಮ್ಮ ಒತ್ತಾಯ ಎಂದರು.

ಜಾಹೀರಾತು

ಕಣ್ಣೊರೆಸುವ ನಾಟಕ:

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಎತ್ತಿನಹೊಳೆಯ ಸಭೆ ಹೋರಾಟಗಾರರ ಕಣ್ಣೊರೆಸುವ ನಾಟಕ ವಾಗಿದ್ದು, ಈ ಸಭೆಯಲ್ಲಿ ದ.ಕ.ಜಿಲ್ಲೆಯ ಕಾಂಗ್ರೇಸ್ ನ ಒಳಜಗಳದ ವೇದಿಕೆಯಾಗಿತ್ತು. , ಹೋರಾಟಗಾರರು ಹಾಗೂ ನಾವು ಸಭೆಯಲ್ಲಿ ಮಂಡಿಸಿದ ಮನವಿಗೆ  ಯಾವುದೇ ಸ್ಪಂದನ ನೀಡದೇ, ದ.ಕ.ಜಿಲ್ಲೆಯ ಉಸ್ತುವಾರಿ ಸಚಿವರ ಸಹಿತ ಜಿಲ್ಲೆಯ ಜನಪ್ರತಿನಿಧಿಗಳು ದರ್ಪದ ಹಾಗೂ ಅಹಂಕಾರದ  ವರ್ತನೆ ತೋರಿದ್ದಾರೆ ಎಂದರು. 

ಜಾಹೀರಾತು

ಸಭೆಯಲ್ಲಿ  ಕೇವಲ ಮಾಹಿತಿ ನೀಡುವ ಕಾರ್ಯವಾಗಿತ್ತೇ ವಿನಃ, ಹೋರಾಟಗಾರರ ಪ್ರಶ್ನೆಗಳಿಗೆ ಅವರಲ್ಲಿ ಯಾವುದೇ ಉತ್ತರವಿರಲಿಲ್ಲಜಿಲ್ಲಾ ಉಸ್ತುವಾರಿ ಸಚಿವರು ಹೋರಾಟಗಾರರನ್ನು ಗೋಡ್ಸೆವಾದಿಗಳೆಂದು ಕರೆಯುವ ಮೂಲಕ ಲಾಡೆನ್ ಗಿಂತಲೂ ಕ್ರೂರವಾಗಿದ್ದ ವರ್ತನೆ ತೋರಿದ್ದರು, ಹಾಗಿದ್ದರೆ ಅವರು ಲಾಡೆನ್ ವಾದಿಗಳಾ ಎಂದವರು  ಪ್ರಶ್ನಿಸಿದರು. ಸಭೆ ನಮ್ಮ ನಿರೀಕ್ಷೆಯಂತೆ ನಡೆಯದ ಹಿನ್ನೆಲೆಯಲ್ಲಿ ಸಭೆಯನ್ನು ಬಹಿಷ್ಕರಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಬಿ.ಸಿ.ರೋಡು-ಕಟ್ಟಡ ತೆರವಿಗೆ ಕ್ರಮ:

ಬಿ.ಸಿ.ರೋಡು ಮೇಲ್ಸೇತುವೆಯ ಸರ್ವೀಸ್ ರಸ್ತೆಯಲ್ಲಿ ಭೂಸ್ವಾಧೀನಗೊಂರುವ ಕಟ್ಟಡಗಳ ತೆರವಿಗೆ ಡಿ.26 ರ ದಿನ ನಿಗದಿಪಡಿಸಿದ್ದರೂ, ಇನ್ನೂಕಾರ್ಯಗತಗೊಂಡಿಲ್ಲವಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಂತಿಮ ಹಂತದ ಗುರುತುಕಾರ್ಯ ನಡೆಸಿದ್ದು, ಸಂಪೂರ್ಣ ವಿವರವನ್ನು ಜಿಲ್ಲಾಧಿಕಾರಿಯವರಿಗೆ ನೀಡಿದ್ದಾರೆ, ಮುಂದಿನ ಎರಡು ಮೂರು ದಿನಗಳ ಒಳಗಾಗಿ  ತೆರವು ಕಾರ್ಯಾಚರಣೆ ನಡೆಯಲಿದೆ , ಅಲ್ಲದೆ  ಸರ್ವೀಸ್ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಅನುದಾನ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದರು ತಿಳಿಸಿದರು.

ಜಾಹೀರಾತು

ಸರಕಾರದಿಂದಲೇ ಅತಿವೃಷ್ಟಿ, ಅನಾವೃಷ್ಟಿ ಸೃಷ್ಟಿ

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ನಾಮಕಾವಾಸ್ತೆ ಸಭೆ ನಡೆದಿದೆ. ಸರಕಾರದ ಈ ಸಭೆ ವಿಫಲವಾದ ಕಾರಣ, ಸರಕಾರದಿಂದಲೇ ಅತಿವೃಷ್ಟಿ ಮತ್ತು ಅನಾವೃಷ್ಟಿ ಸೃಷ್ಟಿಸುವ ಕಾರ್ಯ ನಡೆಯುತ್ತಿದೆ. ಈ ಕುರಿತು ಸಂಸದ ನಳಿನ್ ಹಾಗೂ ಹೋರಾಟಗಾರರ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖಂಡ ರಾಜೇಶ್ ನಾಕ್ ಉಳಿಪಾಡಿಗುತ್ತು ಹೇಳಿದರು.

ಜಾಹೀರಾತು

ಮುಖಂಡರಾದ ಜಿ.ಆನಂದ , ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ಪ್ರಕಾಶ ಅಂಚನ್, ಅಬ್ದುಲ್ ರಝಾಕ್ ಮೊದಲಾದವರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜ.26ರ ಬಳಿಕ ಉಗ್ರ ಹೋರಾಟ: ನಳಿನ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*