ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ವಿದೇಶಿ ಸಂಶೋಧಕರ ಭೇಟಿ

ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರವಿಂದು ದೇಶಿ- ವಿದೇಶಿ ಸಂಶೋಧಕರ ಆಕರ್ಷಣೆಯ ಕೇಂದ್ರವಾಗಿ ಬೆಳೆಯುತ್ತಿದ್ದು, ವಿದೇಶಿಯರ ತಂಡವೊಂದು ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿರುವ ವಸ್ತು ಸಂಗ್ರಹವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿತು.

ಜರ್ಮನಿಯ ಸಂಶೋಧಕಿ ಡಾ. ಹೆಚ್ ಬ್ರೂಕ್‌ನರ್ , ಅಮೇರಿಕಾದ ಪ್ರೊ ಸ್ಟೀಫನ್ ಮೆಕೆನನ್ನ್ ಮತ್ತು ಪ್ರೊ ಆನ್ ಫಿಲ್ಡಾಸ್  ಹಂಪಿ ವಿ.ವಿಯ ಮಾಜಿ ಕುಲಪತಿ ಪ್ರೊ. ಬಿ.ಎ ವಿವೇಕ ರೈ ಜತೆಗೂಡಿ ಬಂದ ತಂಡ ಕೇಂದ್ರದ ತುಳು ಬದುಕು ವಸ್ತು ಸಂಗ್ರಹಾಲಯ ಮತ್ತು ರಾಣಿ ಅಬ್ಬಕ್ಕನ ಬದುಕನ್ನು ಪ್ರತಿಬಿಂಬಿಸುವ ಕಲಾ ಗ್ಯಾಲಾರಿಯನ್ನು ವೀಕ್ಷಿಸಿ ಮಾಹಿತಿ ಸಂಗ್ರಹಿಸಿಕೊಂಡರು.

ಜಾಹೀರಾತು

ಕೇಂದ್ರದ ಸಂಗ್ರಹಾಲಯದ ಚತುರ್ಮುಖ ನಾಗಬಿಂಬದ ಕುರಿತ ಐತಿಹ್ಯ ಮತ್ತು ಇತಿಹಾಸ, ಕೋಟಿ ಚೆನ್ನಯರ ಬಗೆಗಿನ ಹೆಚ್ಚಿನ ಮಾಹಿತಿಯನ್ನು ನೀಡುವುದಲ್ಲದೆ, ತುಳುನಾಡಿನ ಬೆಮ್ಮೆರ್ ಮತ್ತು ನಾಗಬೆಮ್ಮರ ಕುರಿತ ಜಿಜ್ನಾಸೆಗೆ ಇದೊಂದು ಪ್ರಮುಖ ಆಕರವಾಗಿದೆ ಎಂದು ಅಭಿಪ್ರಾಯ ಪಟ್ಟರು.

ಕೇಂದ್ರವು ಸ್ಥಾಪಿತ ಇತಿಹಾಸ ಶಾಸ್ತ್ರಕ್ಕೆ  ಸಮಾನಾಂತರವಾಗಿ ಭೌತಿಕ ವಸ್ತು ಪರಿಕರಗಳು ಮತ್ತು ಮೌಖಿಕ ಇತಿಹಾಸ ಇತಿಹಾಸ ರಚನೆಗೆ ಸಹಕಾರಿ ಎಂದು ಪ್ರತಿಪಾದಿಸುತ್ತಾ ಬಂದಿದೆ.   ಕೆಳಸ್ತರದ ಜನರ ಬದುಕನ್ನು ತೆರೆದಿಡುವ ಈ ವಸ್ತು ಸಂಗ್ರಹಾಲಯ ತುಳುನಾಡಿನ ಸಮಗ್ರ ಪರಂಪರೆ ಮತ್ತು ಇತಿಹಾಸದ ಮುಖವಾಣಿಯಾಗಿ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತ ಪಡಿಸಿದರು. ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಂ ಪೂಜಾರಿ ಹಾಗೂ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ಸಂಶೋದಕರಿಗೆ ಮಾಹಿತಿ ಒದಗಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ವಿದೇಶಿ ಸಂಶೋಧಕರ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*