ಬಂಟ್ವಾಳ

ರಸ್ತೆ ಸುಸ್ಥಿತಿಗೆ ತರದಿದ್ದರೆ ಜ.2ರಂದು ಹೆದ್ದಾರಿ ತಡೆ

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಸಮೀಪ ರಸ್ತೆಯ ಎರಡೂ ಬದಿಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆ ಅಗೆದು ಒಂದೂವರೆ ತಿಂಗಳು ಕಳೆದೂ ಇನ್ನೂ ಕೂಡ ಸುಸ್ಥಿತಿಗೆ ತಾರದಿರುವ ರಾ.ಹೆದ್ದಾರಿ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿ ಜ.2 ರಂದು ಹೆದ್ದಾರಿ ತಡೆಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಪಿಎ ರಹೀಂ ಅವರು ತಿಳಿಸಿದ್ದಾರೆ.

ಬಂಟ್ವಾಳ ತಹಶೀಲ್ದಾರ್, ಪುರಸಭೆ ಹಾಗೂ ಪೊಲೀಸ್ ಇಲಾಖೆಗೆ ಕೈಕಂಬ ಅಂಗಡಿ ಮಾಲಕರ  ಹಾಗೂ ರಿಕ್ಷಾ ಚಾಲಕರ ನಿಯೋಗವೊಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಜಾಹೀರಾತು

 ಹತ್ತು ದಿನಗಳ ಹಿಂದೆಯಷ್ಟೇ ಸ್ಥಳೀಯ ಅಂಗಡಿ ಮಾಲಕರು ಹಾಗೂ ರಿಕ್ಷಾ ಚಾಲಕರು ಅಗೆದು ಹಾಕಿರುವ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಅವರು ಎರಡು ಮೂರು ದಿನಗಳ ಒಳಗಾಗಿ ಸರಿಪಡಿಸುವ ಭರವಸೆ ನೀಡಿದ್ದರು, ಆದರೆ ಅದು ಈವರೆಗೂ ಈಡೇರದ ಹಿನ್ನೆಲೆಯಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗಿದೆ, ಜನವರಿ ಎರಡರಂದು ಸ್ಥಳೀಯ ವಿವಿಧ ಶಾಲಾ ಮಕ್ಕಳು, ಸಾರ್ವಜನಿಕರು, ರಿಕ್ಷಾಚಾಲಕರ ಸಹಕಾರದೊಂದಿಗೆ ರಸ್ತೆತಡೆ  ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಅಗೆದ ರಸ್ತೆಯನ್ನು ಸುಸ್ಥಿತಿಗೆ ತರುವ ವಿಚಾರದಲ್ಲಿ ಇಲಾಖೆಗಳ ನಡುವೆ ಸಮನ್ವತೆಯ ಕೊರತೆ ಇದ್ದು, ಸಾರ್ವಜನಿಕರು ಇದರಿಂದ ತೊಂದರೆ ಅನುಭವಿಸಬೇಕಾಗಿದೆ. ಸಚಿವರ ಸಹಿತ ವಿವಿಧ ಜನಪ್ರತಿನಿಧಿಗಳು ಇದೇ ದಾರಿಯಾಗಿ ಓಡಾಡುತ್ತಿದ್ದರೂ, ಈ ರಸ್ತೆಯ ಬಗ್ಗೆ ಸಂಬಂಧಪಟ್ಟ ಇಲಾಖೆಯ ಕಿವಿ ಹಿಂಡುವ ಕೆಸಲ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು, ತಹಶೀಲ್ದಾರರು ಪುರಸಭೆಯತ್ತ ಬೊಟ್ಟು ಮಾಡಿದರೆ, ಪುರಸಭೆ ಟ್ರಾಫಿಕ್  ಎಸೈ ಚಂದ್ರಶೇಖರಯ್ಯ ರವರೆ ಮೇಲೆ ಬೆರಳು ತೋರಿಸುತ್ತಿದ್ದು, ಪ್ರಮುಖವಾಗಿ ಇದರ ಕಾರ್ಯನಿರ್ವಹಿಸಬೇಕಾಗಿದ್ದ ಹೆದ್ದಾರಿ ಇಲಾಖೆ ಇತ್ತ ತಲೆಹಾಕಿ ಮಲಗುತ್ತಿಲ್ಲ ಎಂದವರು ಆರೋಪಿಸಿದರು.  ಕೈಕಂಬ ರಿಕ್ಷಾಚಾಲಕ ಸಂಘದ ಅಧ್ಯಕ್ಷ ಯಾಕೂಬು, ಪ್ರಮುಖರಾದ ಶಾಹುಲ್ ಹಮೀದ್, ಕೆ.ಹೆಚ್.ಅಬೂಬಕರ್, ಅಜರುದ್ದೀನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ