ನಾಲ್ಕು ದಿನ ನೀರಿಲ್ಲದೆ ಪರದಾಟ

ಪೈಪ್ ಲೈನ್ ಅಳವಡಿಕೆ ಕಾಮಗಾರಿ ಹಿನ್ನೆಲೆ

ಘೋಷಿತ ಮೂರು ದಿನಗಳ ಒಟ್ಟಿಗೆ ಮತ್ತೊಂದು ದಿನ ಸೇರಿ ಶುಕ್ರವಾರದವರೆಗೆ ಬಂಟ್ವಾಳ ಪುರಸಭಾ ನಿವಾಸಿಗಳು ನೀರಿಲ್ಲದ ಸ್ಥಿತಿಯನ್ನು ಅನುಭವಿಸಿದರು.

ಜಾಹೀರಾತು

ಪುರಸಭೆ ವ್ಯಾಪ್ತಿಯ ಎರಡನೇ ಹಂತದ ಬೃಹತ್ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಅಳವಡಿಕೆಯ ಕಾಮಗಾರಿಯ ಹಿನ್ನೆಲೆಯಲ್ಲಿ ಡಿ.27ರಿಂದ 29ವರೆಗೆ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದೆ ಎಂದು ಪುರಸಭೆ ಹಾಗೂ ಕೆ.ಯು.ಡಬ್ಲ್ಯೂಸಿ ಇಲಾಖೆ ಜಂಟಿ ಪ್ರಕಟಣೆ ನೀಡಿತ್ತು. ಇಲಾಖೆಯ ಪ್ರಕಟಣೆಯಂತೆ ನೀರು ಪೂರೈಕೆಯ ವ್ಯತ್ಯಯ ಗುರುವಾರಕ್ಕೆ ಮುಗಿದಿತ್ತು. ಶುಕ್ರವಾರ ಪುರವಾಸಿಗಳಿಗೆ ಬೆಳಗಿನ ಜಾವ ನೀರು ಪೂರೈಕೆಯಾಗಬೇಕಿತ್ತು. ಆದರೆ ಪೈಪ್ ಅಳವಡಿಕೆಯ ಕಾಮಗಾರಿಯ ಸಂದರ್ಭದಲ್ಲಾದ ಅನಾನುಕೂಲತೆಯಿಂದ ಡಿ.30ರಂದು ನಲ್ಲಿಯಲ್ಲಿ ಹರಿಯಬೇಕಾಗಿದ್ದ ನೀರು ವ್ಯತ್ಯಯ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ರೇಣುಕಾಪ್ರಸಾದ್‌ರವರ ಉಪಸ್ಥಿತಿಯಲ್ಲಿ ಬಂಟ್ವಾಳ ಐಬಿಯಲ್ಲಿ ಅಧಿಕಾರಿಗಳ ದಿಢೀರ್ ಸಭೆಯೂ ನಡೆಯಿತು.

ಈ ಸಭೆಯಲ್ಲಿ ಯೋಜನಾ ನಿರ್ದೇಶಕ ಪ್ರಸನ್ನ, ಮುಖ್ಯಾಧಿಕಾರಿ ಸುಧಾಕರ್, ಕೆಯುಡಬ್ಲ್ಯೂಸಿ ಇಂಜಿನಿಯರ್ ಶೋಭಾಲಕ್ಷ್ಮೀ, ಪುರಸಭಾ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು , ಸದಸ್ಯ ಜಗದೀಶ್ ಕುಂದರ್ ಉಪಸ್ಥಿತರಿದ್ದರು. ಈ ಸಭೆಯ ಮಾಹಿತಿ ತಿಳಿದ ಸದಸ್ಯ ಗೋವಿಂದ ಪ್ರಭು ಪುರಸಭೆ ನೀರಿನ ಸಮಸ್ಯೆ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ಸಭೆ ಮುಗಿಯುತ್ತಿದ್ದಂತೆ ಅಧಿಕಾರಿಗಳ ದಂಡು ಕಾಮಗಾರಿ ನಡೆಯುತ್ತಿದ್ದ ಜಕ್ರಿಬೆಟ್ಟು ನೀರು ರೇಚಕ ಸ್ಥಾವರದ ಬಳಿ ಪರಿಶೀಲನೆ ನಡೆಸಿದರು. ಸಂಜೆಯ ವೇಳೆ ನೀರು ಪೂರೈಸುವ ಬಗ್ಗೆ ಮುಖ್ಯಾಧಿಕಾರಿ ಸುಧಾಕರ್ ಹಾಗೂ ಅಧ್ಯಕ್ಷ ರಾಮಕೃಷ್ಣ ಆಳ್ವ ಸುದ್ದಿಗಾರರಿಗೆ ಖಾತ್ರಿಪಡಿಸಿದರು.

ಜಾಹೀರಾತು

ಕೆಯುಡಬ್ಲ್ಯೂಸಿ ಇಂಜಿನಿಯರ್ ಶೋಭಾಲಕ್ಷ್ಮೀಯವರು ಪೈಪ್‌ಲೈನ್ ಅಳವಡಿಕೆಯ ಸ್ಥಳದಲ್ಲಿ ನಿರಂತರ ಮೂರು ದಿನಗಳ ಕಾಲವೂ ಸ್ಥಳದಲ್ಲೇ ಉಪಸ್ಥಿತರಿದ್ದು ಪೈಪ್ ಅಳವಡಿಕೆಗೆ ಸೂಕ್ತ ಮಾರ್ಗದರ್ಶನ ನೀಡಿದರು. ಜಕ್ರಿಬೆಟ್ಟಿನಲ್ಲಿರುವ ರೇಚಕ ಸ್ಥಾವರದಿಂದ ಪೂರೈಕೆಯಾಗುವ ಪೈಪ್‌ಲೈನ್‌ನಲ್ಲಿ ಸೋರಿಕೆಯ ಪರಿಣಾಮ ಎರಡನೆ ಹಂತದ ಕುಡಿಯುವ ನೀರಿನ ಯೋಜನೆಯ ಹೊಸ ಪೈಪ್‌ಲೈನ್ ಅಳವಡಿಕೆಯ ಸಂದರ್ಭದಲ್ಲಿ ಸಮಸ್ಯ ಉಂಟಾಗಿ ಪುರವಾಸಿಗಳಿಗೆ ಇಲಾಖೆ ನೀಡಿದ ಗಡುವಿನ ದಿನದಂದು ನೀರು ಪೂರೈಕೆ ಸಾಧ್ಯವಾಗಿಲ್ಲ. ಇದಕ್ಕಾಗಿ ವಿಷಾದವಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಸುದ್ದಿಗಾರರಿಗೆ ಶೋಭಾಲಕ್ಷ್ಮಿ ತಿಳಿಸಿದರು. ಶುಕ್ರವಾರ ಸಂಜೆಯ ವೇಳೆಗೆ ನಗರವಾಸಿಗಳಿಗೆ ನೀರು ಪೂರೈಸುವ ವಾಗ್ದಾನ ನೀಡಿದಂತೆ ನೀರು ಪೂರೈಕೆಯಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಾಲ್ಕು ದಿನ ನೀರಿಲ್ಲದೆ ಪರದಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*