ಯುವತಿಯ ಕೊಂದು ನೇಣಿಗೆ ಶರಣಾದ ಯುವಕ

www.bantwalnews.com report

ಬಂಟ್ವಾಳ ತಾಲೂಕಿನ ಕೊಯ್ಲದ ಪಾಂಡವರಗುಹೆ ಕೆಸಿಡಿಸಿ ಗೇರು ತೋಟದಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಯುವಕನೊಬ್ಬ ಯುವತಿಯನ್ನು ಮಾರಕಾಯುಧದಿಂದ ಇರಿದು ಹತ್ಯೆ ಮಾಡಿ, ತಾನೂ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರೇಮಿಗಳಾಗಿದ್ದ ಇಬ್ಬರ ನಡುವೆ ಉಂಟಾದ ಯಾವುದೋ ವೈಮನಸ್ಸು ಈ ಘಟನೆಗೆ ಕಾರಣ ಎನ್ನಲಾಗಿದೆ. ರಾಯಿ ಗ್ರಾಮದ ಕೊಯ್ಲ ಕುಡುಮನಿ ನಿವಾಸಿ ಸುಜಿತ್ (28) ತಾನು ಪ್ರೀತಿಸುತ್ತಿದ್ದ ಯುವತಿ ಬಂಟ್ವಾಳ ತಾಲೂಕಿನ ಕುದನಗುಡ್ಡೆ ಬಿ.ಕಸಬಾ ಗ್ರಾಮದ ನಿವಾಸಿ ದಿವ್ಯಾ(23) ಎಂಬಾಕೆಯನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ. ಇಬ್ಬರೂ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಬಳಿಕ ಇಬ್ಬರ ನಡುವೆ ವೈಮನಸ್ಸು ಉಂಟಾಗಿ, ಸುಜಿತ್ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾಹೀರಾತು

ಮಂಗಳೂರಿನಲ್ಲಿ ಸೆಂಟರಿಂಗ್ ಕೆಲಸ ಮಾಡುತ್ತಿದ್ದ ಸುಜಿತ್, ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಿವ್ಯಾಳೊಂದಿಗೆ ಸ್ನೇಹದಿಂದಿದ್ದ. ಸೋಮವಾರ ತನ್ನ ಅಜ್ಜಿ ಮನೆಗೆ ಬಂದಿದ್ದ ಯುವಕ, ಮಂಗಳವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದ. ಯುವತಿಯೂ ಬೆಳಗ್ಗೆ ಮನೆ ಬಿಟ್ಟವಳು ಮರಳಿರಲಿಲ್ಲ. ಇದೇ ಸಂದರ್ಭ ಯುವಕ ತನ್ನ ಸ್ನೇಹಿತರಿಗೆ ನೀಡಿದ ಸಂದೇಶದಲ್ಲಿ ತಾನು ಸಾಯುವ ಸುಳಿವು ನೀಡಿದ್ದ. ಅದರಂತೆ ಈತನ ಹುಡುಕಾಟ ನಡೆಸಲಾಯಿತು. ಗೇರು ತೋಟದ ಬಳಿ ದ್ವಿಚಕ್ರ ವಾಹನವನ್ನು ನೋಡಿ ಹುಡುಕಾಡಿದಾಗ ಯುವತಿಯ ದೇಹದ ಕೆಲ ಭಾಗಗಳಲ್ಲಿ ಇರಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಅನತಿ ದೂರದಲ್ಲೇ ಚೂರಿ ಬಿದ್ದಿತ್ತು. ಅಲ್ಲೇ ಸನಿಹ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಜಾಹೀರಾತು

ಪ್ರೇಮವೈಫಲ್ಯ ಕಾರಣವೇ?

ಇಬ್ಬರೂ ಪ್ರೇಮಿಗಳಾಗಿದ್ದರೂ ಹತ್ಯೆ ಹಾಗೂ ಆತ್ಮಹತ್ಯೆಗೆ ಏನು ಕಾರಣ ಎಂಬುದಕ್ಕೆ ನಿಖರ ಕಾರಣ ಇನ್ನೂ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಆದರೆ ಮೇಲ್ನೋಟಕ್ಕೆ ಇದೊಂದು ಪ್ರೇಮವೈಫಲ್ಯದ ಘಟನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾಹೀರಾತು

ಸುಜಿತ್ ಹಾಗೂ ದಿವ್ಯಾ ಇಬ್ಬರೂ ಬಡ ಕುಟುಂಬದವರಾಗಿದ್ದು, ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ದಿವ್ಯಾ ಮನೆಮಂದಿಗೆಲ್ಲ ಆಧಾರವಾಗಿದ್ದಳು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಎಸ್. ಐ. ರಕ್ಷಿತ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಡಿವೈಎಸ್ಪಿ ರವೀಶ್ ಸಿ.ಆರ್, ಸರ್ಕಲ್ ಇನ್ಸ್ ಪೆಕ್ಟರ್ ಮಂಜಯ್ಯ ಮಾರ್ಗದರ್ಶನದಲ್ಲಿ ಎಸ್ಪಿ ಭೂಷಣ್ ಜಿ.ಬೊರಸೆ ನಿರ್ದೇಶನದಂತೆ ಪೊಲೀಸರು ಮಹಜರು ನಡೆಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವತಿಯ ಕೊಂದು ನೇಣಿಗೆ ಶರಣಾದ ಯುವಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*