ಆಯುಷ್ ಶೆಟ್ಟಿ ರಿಲೇ ತಂಡಕ್ಕೆ ಬೆಳ್ಳಿಪದಕ

ayush with sandarsh shetty

  • ಮಹಾರಾಷ್ಟ್ರ ರಾಜ್ಯ ಸಬ್ ಜ್ಯುನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕೂಟ
  •  https://bantwalnews.com report

ಪುಣೆಯ ಬಾಬುರಾವ್ ಸನಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಾರಾಷ್ಟ್ರ ರಾಜ್ಯ ಮಟ್ಟದ ಸಬ್ ಜ್ಯೂನಿಯರ್ ಅಥ್ಲೆಟಿಕ್ ಕೂಟದಲ್ಲಿ ಮುಂಬಯಿಯ ಆಯುಷ್ ಶೆಟ್ಟಿ ಮತ್ತು ತಂಡ ಬೆಳ್ಳಿ ಪದಕವನ್ನು 4 * 100 ಮೀಟರ್ ರಿಲೇಯಲ್ಲಿ ಪಡೆದುಕೊಂಡಿದೆ.

ಮಹಾರಾಷ್ಟ್ರ ಅಥ್ಲೆಟಿಕ್ಸ್ ಅಸೋಸಿಯೇಶನ್ ರಾಜ್ಯಮಟ್ಟದ ಸಬ್ ಜ್ಯೂನಿಯರ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಆಯೋಜಿಸಿತ್ತು.

ಲಾಂಗ್ ಜಂಪ್ ನಲ್ಲೂ ಆಯುಷ್ ಶೆಟ್ಟಿ ಸಾಧನೆ ಮಾಡಿದ್ದು ರಾಜ್ಯಮಟ್ಟದಲ್ಲಿ ಐದನೇ ಸ್ಥಾನ ಗಳಿಸಿದ್ದಾರೆ. ಮೀರಾ ರೋಡ್ ನ ಎನ್.ಎಲ್. ದಾಲ್ಮಿಯಾ ಹೈಸ್ಕೂಲಿನ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿರುವ ಆಯುಷ್, ದಹಿಸರ್ ರೈಸಿಂಗ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ನ ವರಿಷ್ಠ ತರಬೇತುದಾರ ಸಂತೋಷ್ ಅಂಬ್ರೆ ಮತ್ತು ಅಂತಾರಾಷ್ಟ್ರೀಯ ಆಟಗಾರ ಸಂದರ್ಶ್ ಶೆಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಈಗಾಗಲೇ ಆಯುಷ್ ಮುಂಬಯಿಯ ವಿವಿಧ ಕ್ರೀಡಾಕೂಟಗಳಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಪಡೆದು ಮಿಂಚಿದ್ದು, ಭರವಸೆಯ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಇವರು ಬಂಟ್ವಾಳ ಮೂಲದ ಉದ್ಯಮಿ ಸಮಾಜಸೇವಕ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು ಮತ್ತು ಪುತ್ತೂರು ಶಾಂತಲಾ ಎಸ್. ಶೆಟ್ಟಿ ದಂಪತಿ ಪುತ್ರ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಯುಷ್ ಶೆಟ್ಟಿ ರಿಲೇ ತಂಡಕ್ಕೆ ಬೆಳ್ಳಿಪದಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*