ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮನೆಯೊಂದರಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಮೃತಪಟ್ಟಿದ್ದಾರೆ.
ರಾಜೇಶ್ (42) ಸಾವನ್ನಪ್ಪಿದ ಯುವಕ. ಘಟನೆ ಬೆನ್ನಲ್ಲೇ ನೂರಾರು ಜನಸಮೂಹ ಜಮಾಯಿಸಿದ್ದು, ಸ್ಥಳೀಯರ ನೆರವಿನಿಂದ ರಾಜೇಶ್ ಅವರನ್ನು ಜೀವಂತ ಮೇಲೆತ್ತುವ ಪ್ರಯತ್ನ ನಡೆಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದು, ಶವವನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಯಿತು. ಬಂಟ್ವಾಳ ನಗರ ಪೊಲೀಸರು ಸ್ಥಳದಲ್ಲಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
(more…)