ಆಯುಷ್ ಶೆಟ್ಟಿ ರಿಲೇ ತಂಡಕ್ಕೆ ಬೆಳ್ಳಿಪದಕ

ayush with sandarsh shetty

  • ಮಹಾರಾಷ್ಟ್ರ ರಾಜ್ಯ ಸಬ್ ಜ್ಯುನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಕೂಟ
  •  https://bantwalnews.com report

ಪುಣೆಯ ಬಾಬುರಾವ್ ಸನಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮಹಾರಾಷ್ಟ್ರ ರಾಜ್ಯ ಮಟ್ಟದ ಸಬ್ ಜ್ಯೂನಿಯರ್ ಅಥ್ಲೆಟಿಕ್ ಕೂಟದಲ್ಲಿ ಮುಂಬಯಿಯ ಆಯುಷ್ ಶೆಟ್ಟಿ ಮತ್ತು ತಂಡ ಬೆಳ್ಳಿ ಪದಕವನ್ನು 4 * 100 ಮೀಟರ್ ರಿಲೇಯಲ್ಲಿ ಪಡೆದುಕೊಂಡಿದೆ.

ಮಹಾರಾಷ್ಟ್ರ ಅಥ್ಲೆಟಿಕ್ಸ್ ಅಸೋಸಿಯೇಶನ್ ರಾಜ್ಯಮಟ್ಟದ ಸಬ್ ಜ್ಯೂನಿಯರ್ ಚಾಂಪಿಯನ್ ಶಿಪ್ ಕ್ರೀಡಾಕೂಟ ಆಯೋಜಿಸಿತ್ತು.

ಲಾಂಗ್ ಜಂಪ್ ನಲ್ಲೂ ಆಯುಷ್ ಶೆಟ್ಟಿ ಸಾಧನೆ ಮಾಡಿದ್ದು ರಾಜ್ಯಮಟ್ಟದಲ್ಲಿ ಐದನೇ ಸ್ಥಾನ ಗಳಿಸಿದ್ದಾರೆ. ಮೀರಾ ರೋಡ್ ನ ಎನ್.ಎಲ್. ದಾಲ್ಮಿಯಾ ಹೈಸ್ಕೂಲಿನ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿರುವ ಆಯುಷ್, ದಹಿಸರ್ ರೈಸಿಂಗ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ನ ವರಿಷ್ಠ ತರಬೇತುದಾರ ಸಂತೋಷ್ ಅಂಬ್ರೆ ಮತ್ತು ಅಂತಾರಾಷ್ಟ್ರೀಯ ಆಟಗಾರ ಸಂದರ್ಶ್ ಶೆಟ್ಟಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಈಗಾಗಲೇ ಆಯುಷ್ ಮುಂಬಯಿಯ ವಿವಿಧ ಕ್ರೀಡಾಕೂಟಗಳಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಪಡೆದು ಮಿಂಚಿದ್ದು, ಭರವಸೆಯ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ. ಇವರು ಬಂಟ್ವಾಳ ಮೂಲದ ಉದ್ಯಮಿ ಸಮಾಜಸೇವಕ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು ಮತ್ತು ಪುತ್ತೂರು ಶಾಂತಲಾ ಎಸ್. ಶೆಟ್ಟಿ ದಂಪತಿ ಪುತ್ರ.

ಜಾಹೀರಾತು

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಆಯುಷ್ ಶೆಟ್ಟಿ ರಿಲೇ ತಂಡಕ್ಕೆ ಬೆಳ್ಳಿಪದಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*