ಮೂಡುಬಿದಿರೆಯಲ್ಲಿ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ, ಡಾ.ಎಲ್.ಸಿ.ಸೋನ್ಸ್ ಅಧ್ಯಕ್ಷ

bantwalnews.com

ಮೂಡುಬಿದಿರೆ ರೋಟರಿ ಕ್ಲಬ್ ಮುಂದಾಳುತ್ವದಲ್ಲಿ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗಾಗಿ ಅಗತ್ಯ ಕ್ರಮಗಳನ್ನು ರೂಪಿಸುವ ನಿಟ್ಟಿನಲ್ಲಿ ಸಮಾನ ಮನಸ್ಕ ಸಂಘಟನೆಗಳು, ಸ್ಥಳೀಯಾಡಳಿತ, ನಾಗರಿಕರ ಸಹಯೋಗದೊಂದಿಗೆ ಮೂಡುಬಿದಿರೆ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬಂದಿದೆ.

ಜಾಹೀರಾತು

ಮೂಡುಬಿದಿರೆ ರೋಟರಿ ಕ್ಲಬ್‌ನೊಂದಿಗೆ, ಮೂಡುಬಿದಿರೆ ಪ್ರೆಸ್ ಕ್ಲಬ್, ಕೃಷಿ ವಿಚಾರ ವಿನಿಮಯ ಕೇಂದ್ರ, ಮೂಡುಬಿದಿರೆ ಪುರಸಭೆ ಕೈಜೋಡಿಸಿವೆ. ಜಲ ಸಂರಕ್ಷಣೆಯ ಬಗ್ಗೆ ಚಿಂತನೆ ನಡೆಸಿ, ಸಾರ್ವಜನಿಕರಲ್ಲಿ ಜನಜಾಗೃತಿ ರೂಪಿಸುವ ಜೊತೆಗೆ ಸರಕಾರ ಮತ್ತು ಇತರ ಮೂಲಗಳಿಂದ ಲಭ್ಯ ಅನುದಾನಗಳಿಂದ ಮಾಡಬಹುದಾದ ಜಲ ಸಂರಕ್ಷಣಾ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಮೂಡುಬಿದಿರೆ ಜಲ ಸಂರಕ್ಷಣಾ ಸಮಿತಿ ಸಹಕರಿಸಲಿದೆ.

18 ಕೆರೆಗಳಿಗಾಗಿ ಹೆಸರಾದ ಮೂಡುಬಿದಿರೆಯ ಹಲವು ಕೆರೆಗಳ ಕಣ್ಮರೆಯಾಗುವ ಸ್ಥಿತಿಯಲ್ಲಿದ್ದು ಅವುಗಳಲ್ಲಿ ಕನಿಷ್ಠ 6 ಕೆರೆಗಳಿಗೆ ಕಾಯಕಲ್ಪ ನೀಡುವ ಜೊತೆಗೆ, ಸಾಧ್ಯವಾದಲ್ಲಿ ಒಡ್ಡುಗಳನ್ನು ನಿರ್ಮಿಸಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಸಮಿತಿ ಯೋಜನೆ ರೂಪಿಸಿದೆ. ರೋಟರಿ ಸಮ್ಮೀಲನ್ ಸಭಾಭವನದಲ್ಲಿ ಗುರುವಾರ ನಡೆದ ಸಮಾಲೋಚನ ಸಭೆಯಲ್ಲಿ ಸಮಿತಿಯನ್ನು ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಡಾ.ಎಲ್.ಸಿ ಸೋನ್ಸ್ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಿ.ಕೆ ಥೋಮಸ್ ಕಾರ್ಯಾಧ್ಯಕ್ಷರಾಗಿದ್ದು, ಜೈಸನ್ ತಾಕೋಡೆ( ಕಾರ್ಯದರ್ಶಿ),ರಾಜವರ್ಮ ಬೈಲಂಗಡಿ(ಉಪಾಧ್ಯಕ್ಷ) ಅನಂತಕೃಷ್ಣ ರಾವ್ (ಕೋಶಾಧಿಕಾರಿ), ವಿನೋದ್ ಸೆರಾವೋ(ಜೊತೆ ಕಾರ್ಯದರ್ಶಿ) ಆಯ್ಕೆಯಾಗಿದ್ದಾರೆ.

ಜಾಹೀರಾತು

ಮಹಮ್ಮದ್ ಶರೀಫ್, ಡಾ.ಮುರಳೀಕೃಷ್ಣ, ಸುಭಾಶ್ಚಂದ್ರ ಚೌಟ, ರತ್ನಾಕರ ದೇವಾಡಿಗ, ಡಾ.ಸುದೀಪ್ ಕುಮಾರ್, ಶ್ರೀಕಾಂತ್ ರಾವ್, ಸೀತಾರಾಮ ಆಚಾರ್ಯ, ಅಲ್ವಿನ್ ಮೆನೇಜಸ್, ಜಿನೇಂದ್ರ ಹೆಗ್ಡೆ, ಧನಂಜಯ ಮೂಡುಬಿದಿರೆ, ಸುರೇಶ್ ಕೋಟ್ಯಾನ್, ಮಕ್ಬೂಲ್ ಹುಸೇನ್, ದಿನೇಶ್, ಯಶೋಧರ ಬಂಗೇರ, ಕೊರಗಪ್ಪ, ಲವೀನಾ ತಾಕೋಡೆ ಕಾರ್ಯಕಾರಿಣಿ ಸಮಿತಿಯ ಸದಸ್ಯರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೂಡುಬಿದಿರೆಯಲ್ಲಿ ಜಲಸಂರಕ್ಷಣಾ ಸಮಿತಿ ಅಸ್ತಿತ್ವಕ್ಕೆ, ಡಾ.ಎಲ್.ಸಿ.ಸೋನ್ಸ್ ಅಧ್ಯಕ್ಷ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*