ಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯ

https://bantwalnews.com

ಕೊಕ್ಕಡ ಗ್ರಾಮದ ಆಲಡ್ಕ ನಿವಾಸಿ ಬಾಬು ಗೌಡ (62), ಪತ್ನಿ ಗಂಗಮ್ಮ (55), ಎಂಡೋಸಲ್ಫಾನ್ ಪೀಡಿತ ಮಗ ಸದಾನಂದ ಗೌಡ (32), ನಿತ್ಯಾನಂದ (30) ಶವಗಳು ಮನೆ ಸಮೀಪದ ಕೆರೆಯಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಈ ಕುಟುಂಬದ ಮತ್ತೋರ್ವ ಸದಸ್ಯ ದಯಾನಂದನೋರ್ವನೇ ಬದುಕುಳಿದ ವ್ಯಕ್ತಿ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಗ್ರಾಮ ಸಹಿತ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಕ ಪರಿಣಾಮ ಬೀರಿದ ಎಂಡೋಸಲ್ಫಾನ್ ವಿಷ ಸಿಂಪಡಣೆಯ ಪರೋಕ್ಷ ಪರಿಣಾಮ ಈ ಸಾವು.

ಇಬ್ಬರು ಪುತ್ರರು ಎಂಡೋಸಲ್ಫಾನ್ ಪ್ರಭಾವದಿಂದಾಗಿ ತೊಂದರೆ ಅನುಭವಿಸುತ್ತಿದ್ದವರು. ಸದಾನಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದರೆ, ಮತ್ತೋರ್ವ ದಯಾನಂದ ತೃತೀಯ ಲಿಂಗಿಯಾಗಿದ್ದ. ಸರಿ ಇದ್ದ ಪುತ್ರ ನಿತ್ಯಾನಂದ ಮಂಗಳೂರಿನ ಬೇಕರಿ, ಕಡಬ ಸಮೀಪ ಮರದ ಮಿಲ್ಲಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದ. ಬಾಬು ಗೌಡರಿಗೆ ಇದೇ ಚಿಂತೆ ಆವರಿಸಿಕೊಂಡಿತ್ತು. ತನ್ನ ನಂತರ ಈ ಮಕ್ಕಳ ಗತಿಯೇನು ಎಂಬ ಯೋಚನೆಯಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದೆ.

ಕೊಕ್ಕಡದ ಎಂಡೋ ಪಾಲನಾ ಕೇಂದ್ರಕ್ಕೆ ಸದಾನಂದನನ್ನು ಸೇರಿಸಲಾಯಿತಾದರೂ, ಈತನನ್ನು ಪಾಲನೆ ಮಾಡುವಷ್ಟು ವ್ಯವಸ್ಥೆ ಅಲ್ಲಿರಲಿಲ್ಲ ನಿತ್ಯಾನಂದನಿಗೆ ಬೈಕ್ ತೆಗೆಸಿಕೊಂಡಲಾಗಿತ್ತು. ಆ ಬೈಕ್ ಎರಡು ಸಲ ಅಪಘಾತವಾಗಿತ್ತು. ಅಪಘಾತದಲ್ಲಿ ಕಾಲಿಗೆ ಗಾಯವಾಗಿ ಕೆಲಸ ಮಾಡಲು ಅಸಾಧ್ಯವಾಗಿತ್ತು. ಇದು ಬಾಬು ಗೌಡರನ್ನು ಚಿಂತಗೆ ತಳ್ಳಿತ್ತು. ಸರಿಯಾಗಿದ್ದ ಒಬ್ಬ ಮಗನ ಸ್ಥಿತಿಯೂ ಈ ರೀತಿಯಾಗಿದ್ದರಿಂದ ದಂಪತಿಗಳು ಕೊರಗುತ್ತಿದ್ದರು.

ಜಾಹೀರಾತು

ಕೊನೆಯ ಮಗ ದಯಾನಂದ ಮಂಗಳೂರಿನಲ್ಲಿರುತ್ತಿದ್ದ. ಆತನ ಸ್ಥಿತಿ ಕಂಡು ದಂಪತಿ ನಿತ್ಯ ಮರುಗುತ್ತಿದ್ದರು. ಕೆಲ ದಿನಗಳ ಹಿಂದೆಯೇ ಬಾಬು ಗೌಡರು ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬುಧವಾರ ಮಧ್ಯಾಹ್ನ ಎರಡನೇ ಮಗ ನಿತ್ಯಾನಂದ ಮನೆಯಿಂದ ಹೊರಹೋದವನು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೊರನಡೆದಿದ್ದ. ಆತ ಮನೆ ಸಮೀಪದ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ರಾತ್ರಿಯಾದರೂ ಮನೆಗೆ ಮಗ ಬರದಿದ್ದನ್ನು ಕಂಡು ಆತ ಆತ್ಮಹತ್ಯೆ ಮಾಡಿಕೊಂಡಿರುವುದು ದಿಟ ಎಂದು ತಿಳಿದ ಬಾಬು ಗೌಡ, ಗಂಗಮ್ಮ, ಮಗ ಸದಾನಂದ ಜೊತೆ ರಾತ್ರಿ 9 ಗಂಟೆಯ ಸುಮಾರಿಗೆ ತನ್ನ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಊರವರಿಗೆ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದಿದೆ. ಧರ್ಮಸ್ಥಳ ಪೊಲೀಸರು ಬಂದು ಸ್ಥಳ ಪರಿಶೀಲಿಸಿದಾದ ಒಂದೇ ಕೆರೆಯಲ್ಲಿ ಮೂವರು ಹಾಗೂ ಇನ್ನೊಬ್ಬ ಮತ್ತೊಂದು ಕರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂತು.

ಬಾಬು ಗೌಡರಿಗೆ ಆರ್ಥಿಕ ಮುಗ್ಗಟ್ಟಿರಲಿಲ್ಲ. ಮಕ್ಕಳ ಈ ಸ್ಥಿತಿಯಿಂದ ಕುಟುಂಬ ಆತ್ಮಹತ್ಯೆಗೆ ಶರಣಾಯಿತು. ಸ್ಥಳಕ್ಕೆ ಎಸ್‌ಪಿ ಭೂಷಣ್ ಜಿ. ಭೋರಸೆ, ಡಿವೈಎಸ್‌ಪಿ ಸಿ.ಆರ್. ರವೀಶ್, ಬೆಳ್ತಂಗಡಿ ತಹಸೀಲ್ದಾರ್ ತಿಪ್ಪೆಸ್ವಾಮಿ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಂಡೋಸಲ್ಫಾನ್ ಪೀಡಿತ ಕುಟುಂಬದ ದುರಂತ ಅಂತ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*