ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ

ಕಣ್ಣು ಅಮೂಲ್ಯ ಅಂಗವಾಗಿದ್ದು, ಅದರ ರಕ್ಷಣೆ ಮಾಡುವ ಜವಾಬ್ದಾರಿ ನಮಗಿದೆ ಎಂದು ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್ ಕಾರ್ಯದರ್ಶಿ ವೇಣುಗೋಪಾಲ ಶೆಣೈ ಹೇಳಿದರು.

ಶುಕ್ರವಾರ ಎರುಂಬು ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಆಶ್ರಯದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಸಹಯೋಗದೊಂದಿಗೆ ಜಿಲ್ಲಾ ವೆನ್‌ಲಾಕ್ ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಮತ್ತು ಅಂಧತ್ವ ನಿವಾರಣ ಸಂಸ್ಥೆ ಮಂಗಳೂರು ಇದರ ತಜ್ಞ ವೈದರಿಂದ ನಡೆದ ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ ದಲ್ಲಿ ಮಾತನಾಡಿದರು.

ಉಪ್ಪಳ ಶ್ರೀ ಭಗವತೀ ಕ್ಷೇತ್ರದ ಆಚಾರಪಟ್ಟವರು ಗೋಪಾಲಕೃಷ್ಣ ಬೆಳ್ಚಪ್ಪಾಡ ಅವರು ಶಿಬಿರವನ್ನು ಉದ್ಘಾಟಿಸಿದರು. ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಅಧ್ಯಕ್ಷ ರವೀಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಎರುಂಬು ಬೊಳ್ನಾಡು ಶ್ರೀ ಭಗವತೀ ಸೇವಾ ಮಹಿಳಾ ಸಂಘದ ವತಿಯಿಂದ ಫೆ.೫ ರಂದು ನಡೆಯಲಿರುವ ಸಾಮೂಹಿಕ ಶ್ರೀ ದುರ್ಗಾ ಪೂಜೆ ಹಾಗೂ ತೀಯಾ ಮಾತೃ ಸಮ್ಮಿಲನದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ವೆನ್‌ಲಾಕ್ ಸಂಚಾರಿ ನೇತ್ರ ಘಟಕದ ನೇತ್ರಾಧಿಕಾರಿ ಸವಿತಾ ಕುಲಕರ್ಣಿ, ಶಿಬಿರದ ನಿರ್ದೇಶಕ ಡಾ. ಮನೋಹರ ರೈ, ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ನೇತ್ರಾಧಿಕಾರಿ ಶಾಂತರಾಜ್, ಜನಸಮೃದ್ಧಿ ಮಲ್ಟಿ ಸರ್ವೀಸ್ ಕೋ ಸೊಸೈಟಿಯ ಪ್ರದೀಫ್ ಉಕ್ಕುಡ, ವೆನ್‌ಲಾಕ್ ಆಸ್ಪತ್ರೆಯ ಡಾ. ಜಯಂತಿ, ಬೊಳ್ನಾಡು ಶ್ರೀ ಭಗವತೀ ತೀಯಾ ಯುವಜನ ಸಂಘದ ಗೌರವಾಧ್ಯಕ್ಷ ರಾಜೇಶ್ ಕರವೀರ, ಬೊಳ್ನಾಡು ಶ್ರೀ ಭಗವತೀ ದೇವಸ್ಥಾನ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಆನಂದ ಕಲ್ಲಕಟ್ಟ, ಕೋಶಾಧಿಕಾರಿ ಶ್ರೀಧರ ಅಳಿಕೆ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ಸದಾಶಿವ ಅಳಿಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಉದಯ ದೂಜಮೂಲೆ ವಂದಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*