ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ತಮಿಳುನಾಡು ಅಧ್ಯಯನ

bantwalnews.com report

ಶಾಲಾ ದತ್ತು ಯೋಜನೆಯಡಿ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೋಟ್ಯಾಂತರ ರುಪಾಯಿ ವೆಚ್ಚದ ನೂತನ ಕಟ್ಟಡವನ್ನು ನಿರ್ಮಿಸುವುದರ ಜೊತೆಗೆ ಬಡವರ ಮಕ್ಕಳಿಗಾಗಿ ಸರಕಾರಿ ಶಾಲೆಗಳನ್ನು ಉಳಿಸಬೇಕೆಂಬ ಪಣತೊಟ್ಟು ಶೈಕ್ಷಣಿಕ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದಕ್ಷಿಣ ಭಾರತದ ರಾಜ್ಯಗಳ ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನವನ್ನು ಮುಂದುವರೆಸಿದೆ. ಕಳೆದ ತಿಂಗಳು ಕೇರಳ ರಾಜ್ಯದಲ್ಲಿ ಸರಕಾರಿ ಶಾಲೆಗಳನ್ನು ಭೇಟಿ ಮಾಡಿದ್ದ ತಂಡ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಗುರುವಾರ ತಮಿಳುನಾಡು ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದೆ.

ಜಾಹೀರಾತು

ತಮಿಳುನಾಡಿನ  ಈರೋಡ್ ಜಿಲ್ಲೆಯ ಸೂಲೈ ತಾಲೂಕಿನ  ಸುಕ್ಕಿರಮನಿಯಾ ಪಂಚಾಯತ್ ಯೂನಿಯನ್ ಶಾಲೆ, ಭವಾನಿ ತಾಲೂಕಿನ ವೇಳಂಪಾಲಯಂ ಪಂಚಾಯಿತಿ ಯೂನಿಯನ್ ಶಾಲೆ, ಕಗಲೂರಿನ ಪಂಚಾಯಿತಿ ಯೂನಿಯನ್ ಪ್ರಾಥಮಿಕ ಶಾಲೆಗಳನ್ನು ತಂಡ ಸಂದರ್ಶಿಸಿತು.

ತಮಿಳುನಾಡಿನ ಬಹುತೇಕ ಸರಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಸಮಸ್ಯೆ ಇಲ್ಲ ಎನ್ನುವುದು ತಂಡ ಅಧ್ಯಯನದಲ್ಲಿ ಕಂಡು ಕೊಂಡಿದೆ. ಒಂದರಿಂದ ಏಳನೆ ವರೆಗಿನ ಪ್ರಾಥಮಿಕ ಶಾಲೆಗಳಲ್ಲಿ ಇನ್ನೂರ ಐವತ್ತಕ್ಕೆ ಕಡಿಮೆ ಇಲ್ಲದಂತೆ ವಿದ್ಯಾರ್ಥಿಗಳ ಸಂಖ್ಯೆಯಿದೆ. ವಿದ್ಯಾರ್ಥಿಗಳಿಗನುಗುಣವಾಗಿ ಶಿಕ್ಷಕರ ಸಂಖ್ಯೆಯಿದೆ. ಹತ್ತು ವರ್ಷಗಳ ಹಿಂದೆ ಶಾಲೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳಿದ್ದರು ಮಧ್ಯಂತರದಲ್ಲಿ ಆಂಗ್ಲ ಭಾಷಾ ವ್ಯಾಮೋಹದಿಂದ ಪೋಷಕರು ಖಾಸಗಿ ಶಾಲೆಯತ್ತ ಒಲವು ತೋರಿದ್ದರು. ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಭಾಷೆ ಕಲಿಕೆಯನ್ನು ಖಡ್ಡಾಯಗೊಳಿಸದ ಬಳಿ ಮತ್ತೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಏರಿಕೆಯಾಗಿದೆ ಎಂದು ಅಲ್ಲಿನ ಶಿಕ್ಷಕರು ತಂಡಕ್ಕೆ ತಿಳಿಸಿದರು.

ಜಾಹೀರಾತು

ಸ್ಮಾರ್ಟ್ ತರಗತಿಗಳು, ಸರಕಾರದ ವಿವಿಧ ಯೋಜನೆಗಳು,  ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಪೋಷಕರ ಪರಿಶ್ರಮದಿಂದಾಗಿ ಸರಕಾರಿ ಶಾಲೆಗಳತ್ತ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಬೆಳಿಗ್ಗೆ ಪ್ರಾಣಾಯಾಮ ತರಗತಿ, ಮಧ್ಯಾಹ್ನದ ವೇಳೆ ಯೋಗ ತರಗತಿ ಹಾಗೂ ಸಂಜೆ ದೈಹಿಕ ಕ್ರೀಡೆಗಳು ಪಠ್ಯೇತರ ತರಗತಿಗಳಾಗಿ  ನಿಯಮ ಬದ್ದವಾಗಿ ನಡೆಸಲಾಗುತ್ತಿದೆ ಎಂಬುದು ತಂಡದ ಸದಸ್ಯರ ಅಧ್ಯಯನದಲ್ಲಿ ಕಂಡುಬಂದಿದೆ.

ಅಧ್ಯಯನ ತಂಡದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಅಂಚನ್, ಉಪಾಧ್ಯಕ್ಷ ರಮೇಶ್ ಕುಲಾಲ್ ಕರೆಂಕಿ, ತಮಿಳುನಾಡಿನ ಶಿಕ್ಷಣಾಸಕ್ತರಾದ ಶಿವರಾಜ್ ಚೆನ್ನಮಲೈ, ಸೋಮು ಈರೋಡ್, ಶಿಕ್ಷಕ ಕುಮಾರ್ ಈರೋಡ್ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ತಮಿಳುನಾಡು ಅಧ್ಯಯನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*