ಕಲ್ಲಡ್ಕ

ಪ್ರಚಾರ ರಾಜಕೀಯ ಮಾಡದೆ ಬಡವರ ಕಣ್ಣೀರು ಒರೆಸಿ: ರೈ

ಆಡಳಿತ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಇಚ್ಛಾ ಶಕ್ತಿಯಿಂದ ಪ್ರಯತ್ನಿಸಿ , ಪ್ರಚಾರ ರಾಜಕೀಯವನ್ನ ಮಾಡದೆ ಬಡವರ ಕಣ್ಣೀರನ್ನು ಒರೆಸಿ ಬಡವ ಶ್ರೀಮಂತ ಎಂಬ ಕೀಳು ಭಾವನೆಯನ್ನು ನನೆಯದೆ ಸಾಮಾಜಿಕ ಚಿಂತನೆಯನ್ನು ಮಾಡಿ ಎಂದು  ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನುಡಿದರು.

ಕಡೇಶ್ವಾಲ್ಯ ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ  ಕಲ್ಲಾಜೆ ಮೈದಾನದಲ್ಲಿ  ಜರಗಿದ  ಕಾರ್ಯಕರ್ತರ ಸಭೆ ಮತ್ತು ಕೃತಜ್ಞತಾ ಸಮಾರಂಭ ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ನೋಟು ಬದ ಲಾವಣೆಯಿಂದ ಮಧ್ಯಮ ವರ್ಗದ  ಜನರಿಗೆ ಮತ್ತು ಬಡವರಿಗೆ ತುಂ ಬಾ ತೊಂದೆರೆಯಾಗುತ್ತಿದೆ ಎಂದು ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ನುಡಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಆಲಿತಾ.ಪಂ.ಸದಸ್ಯರಾದ ಸಂಜೀವ ಪೂಜಾರಿ ಹಾಗೂ ಪ್ರಗತಿಪರ ಕೃಷಿಕರಾದ ವಾಸು ಪೂಜಾರಿ ಪತ್ತುಕೊಡಂಗೆ, ವಿಠಲ ಶೆಟ್ಟಿ ಮಿತ್ತಿಮಾರು, ಕಡೇಶ್ವಾಲ್ಯ  ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ  ಈಶ್ವರ ಪೂಜಾರಿ ಉಪಸ್ಥಿತರಿದ್ದರು.

ವಲಯ ಕಾಂಗ್ರೆಸ್ ಅಧ್ಯಕ್ಷ ನ್ಯಾಯವಾದಿ ಚಿದಾನಂದ ಕಡೇಶ್ವಾಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಮೋಹನ್ ಕುಮಾರ್ ವಂದಿಸಿದರು. ಶೀನ ನಾಯ್ಕ ನೆಕ್ಕಿಲಾಡಿ ಮತ್ತು ಯೋಗೀಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ