ವಿಟ್ಲ ಜಾತ್ರೆ: ಪ್ರತಿ ದಿನವೂ ಉತ್ಸವ, ಅನ್ನಸಂತರ್ಪಣೆ, ಸಾಂಸ್ಕೃತಿಕ ವೈಭವ

ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೋತ್ಸವ ಜ.14ರಿಂದ ಧ್ವಜಾರೋಹಣಗೊಂಡು ಜ.22ರವರೆಗೆ ಉತ್ಸವಾದಿಗಳು ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ, ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಹೇಳಿದರು.

bantwalnews.com report

ಜಾಹೀರಾತು

ಜ.13ರಂದು ಸಂಜೆ ೬ಕ್ಕೆ ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತಿಯಲ್ಲಿ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಸೀಮೆಯ ಪ್ರತಿ ಮನೆಯಿಂದ, ಫಲವಸ್ತುಗಳ ಜತೆಯಲ್ಲಿ ಹೊರೆಕಾಣಿಕೆಯಲ್ಲಿ ಭಾಗವಹಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅವರು ವಿನಂತಿಸಿದರು.

ಜ.14ರಂದು 10 ಗಂಟೆಗೆ ಧ್ವಜಾರೋಹಣ, ಸಂಜೆ 6ಕ್ಕೆ ಬಸದಿಯಿಂದ ಭಜನಾ ಉಲ್ಪೆ ಮೆರವಣಿಗೆ, ರಾತ್ರಿ 8.30 ರಿಂದ ಲಕ್ಷದೀಪೋತ್ಸವ ನಡೆಯಲಿದ್ದು ಭಕ್ತಾದಿಗಳು 5 ಹಣತೆಗಳೊಂದಿಗೆ ಆಗಮಿಸಿ ದೇವಾಲಯದ ಸುತ್ತ ಹಣತೆ ಹಚ್ಚಿ ದೀಪೋತ್ಸವದಲ್ಲಿ ಭಾಗವಹಿಸಬೇಕು.

ಜ.15ರಂದು ಸಂಜೆ 6.30 ಕ್ಕೆ ನಿತ್ಯೋತ್ಸವ ನಡೆಯಲಿದ್ದು, ಜ.16 ರಂದು ಸಂಜೆ ೬ ೩೦ಕ್ಕೆ ನಿತ್ಯೋತ್ಸವ ನಡೆಯಲಿದೆ.

ಜಾಹೀರಾತು

ಜ.17ರಂದು ಸಂಜೆ ನಿತ್ಯೋತ್ಸವ, ಜ.18ರಂದು ರಾತ್ರಿ 8.30 ಕ್ಕೆ ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಬರಲಿದ್ದು, 9 ಕ್ಕೆ ಬಯ್ಯದ ಬಲಿ ಉತ್ಸವ ನಡೆಯಲಿದೆ. ಜ.19 ರಂದು ಬೆಳಗ್ಗೆ 9.30 ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ, ರಾತ್ರಿ ೮ಕ್ಕೆ ನಡು ದೀಪೋತ್ಸವ ನಡೆಯಲಿದ್ದು, ಬಹು ವರ್ಷಗಳ ಬಳಿಕ ಈ ಬಾರಿ ವಿಶೇಷವಾಗಿ ತೆಪ್ಪೋತ್ಸವ ನಡೆಯಲಿದೆ.

ಜ.20ರಂದು ಬೆಳಗ್ಗೆ 5 ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ, ರಾತ್ರಿ 9ಕ್ಕೆ ಹೂತೇರು ನಡೆಯಲಿದೆ. ಜ. 21 ರಂದು ಬೆಳಗ್ಗೆ ದರ್ಶನ ಬಲಿ, ರಾಜಾಂಗಣದ ಬಟ್ಲು ಕಾಣಿಕೆ, ಪ್ರಸಾದ ವಿತರಣೆ, ರಾತ್ರಿ 7.30 ಕ್ಕೆ ಕಡ್ಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಬರುವುದು, ರಾತ್ರಿ ೮ಕ್ಕೆ ಮಹಾ ರಥೋತ್ಸವ, ಬೀದಿ ಮೆರವಣಿಗೆ, ಶಯನೋತ್ಸವ ನಡೆಯಲಿದೆ.

ಜ.22ರಂದು ಬೆಳಗ್ಗೆ 9 ಗಂಟೆಗೆ ಕವಟೋದ್ಘಾತನೆ, ಮಹಾಪೂಜೆ, ಕಾಲಾವಧಿ ಬಟ್ಲು ಕಾಣಿಕೆ, ತುಲಾಭಾರ ಸೇವೆ, ರಾತ್ರಿ 10ಕ್ಕೆ ಅವಭೃತ ಸ್ನಾನಕ್ಕೆ ಕೊಡಂಗಾಯಿಗೆ ಸವಾರಿ, ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಲಿದೆ.

ಜಾಹೀರಾತು

ಜ.24ರಂದು ಮಧ್ಯಾಹ್ನ 1ಗಂಟೆಗೆ ಕೇಪುವಿನ ಶ್ರೀ ಮಲರಾಯಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ ನಡೆಯಲಿದೆ.ಜ. 26 ಕ್ಕೆ ಮಧ್ಯಾಹ್ನ 2 ಗಂಟೆಗೆ ಅರಮನೆಯಲ್ಲಿ ನೇಮೋತ್ಸವ ಬಳಿಕ ಕೇಪಿಗೆ ಭಂಡಾರ ಹೊರಡುವುದು. ಜ.25 ರಂದು ಎಂದು ತಿಳಿಸಿದರು.

ಭಕ್ತ ವೃಂದದ ಗೋವರ್ಧನ್ ಇಡ್ಯಾಳ, ಜಗದೀಶ್ ಪಾಣೆಮಜಲು, ಶ್ರೀಕೃಷ್ಣ, ಸೇಸಪ್ಪ ಬೆದ್ರಕಾಡು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ಜಾತ್ರೆ: ಪ್ರತಿ ದಿನವೂ ಉತ್ಸವ, ಅನ್ನಸಂತರ್ಪಣೆ, ಸಾಂಸ್ಕೃತಿಕ ವೈಭವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*