ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮದಡಿ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಗರ್ಭಗುಡಿ, ಒಳಾಂಗಣ, ಹೊರಾಂಗಣವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಂಟ್ವಾಳ, ಕಲ್ಲಡ್ಕ ವಲಯ ಗೋಳ್ತಮಜಲು ಕಾರ್ಯಕ್ಷೇತ್ರ ಒಕ್ಕೂಟ ಸದಸ್ಯರು ಸ್ವಚ್ಚಗೊಳಿಸಿದರು.
ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರು, ನೌಕರ ವರ್ಗ, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು, ಊರ ಭಕ್ತವೃಂದದವರು , ಜೀರ್ಣೋದ್ಧಾರ ಸಮಿತಿ, ಉತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.
ಆಡಳಿತ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಬರಿಮಾರ್, ವಲಯ ಮೇಲ್ವಿಚಾರಕ ಶಿವಪ್ಪ ಎಂ.ಕೆ., ಸೇವಾ ಪ್ರತಿನಿಧಿ ಮಾಲತಿ, ಒಕ್ಕೂಟ ಅಧ್ಯಕ್ಷೆ ಮೋಹಿನಿ ಮತ್ತು ಪದಾಽಕಾರಿಗಳು, ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳಾದ ಕೆ.ಪದ್ಮನಾಭ ರೈ, ಬಟ್ಯಪ್ಪ ಶೆಟ್ಟಿ, ಗಣೇಶ್ ನಾಯ್ಕ, ಬಾಲಪ್ಪ ಗೌಡ, ಡಾ| ವಸಂತ ನಿಟಿಲಾಪುರ, ಹೇಮಾವತಿ, ಚೇತನಾ ಮತ್ತಿತರರು ಉಪಸ್ಥಿತರಿದ್ದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಆಶಯದಂತೆ ಸ್ವಚ್ಚತಾ ಅಭಿಯಾನವನ್ನು ಮುಂದುವರಿಸಿಕೊಂಡು ದೇವಸ್ಥಾನ ವಠಾರದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಬರಲು ನಿಶ್ಚಯಿಸಲಾಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…