ವಿಟ್ಲ

ಪಡಿಬಾಗಿಲು – ಬೈರಿಕಟ್ಟೆ ನಡುವೆ ವಾಹನ ಸಂಚಾರ ನಿಷೇಧ

bantwalnews.com report

ಸುಬ್ರಹ್ಮಣ್ಯ – ಮಂಜೇಶ್ವರ ಹೆದ್ದಾರಿಯ ಮಡೆಯಾಲದಲ್ಲಿ ಸೇತುವೆ ಪುನರ್ ನಿರ್ಮಾಣ ಕಾರ್ಯದ ಹಿನ್ನಲೆಯಲ್ಲಿ ಬದಲಿ ರಸ್ತೆ ವ್ಯವಸ್ಥೆ ಮಾಡುವಂತೆ ಹಾಗೂ ಈ ಹಿನ್ನೆಲೆಯಲ್ಲಿ ಪಡಿಬಾಗಿಲು – ಬೈರಿಕಟ್ಟೆ ನಡುವೆ ವಾಹನ ಸಂಚಾರ ನಿಷೇಧಿಸಿ ಆದೇಶ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಸುಬ್ರಹ್ಮಣ್ಯ ಮಂಜೇಶ್ವರ ರಾಝ್ಯ ಹೆದ್ದಾರಿ 100ರ 80.60ಕಿಮೀ ಯಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಹಳೆ ಸೇತುವೆಯನ್ನು ಕೆಡವಬೇಕಾಗಿದೆ. ಈ ಪ್ರದೇಶದಲ್ಲಿ ಇಳಿಜಾರು ಇರುವುದರಿಂದ ಬದಲಿ ರಸ್ತೆ ನಿರ್ಮಾಣಕ್ಕೂ ಸಮಸ್ಯೆಗಳಿದೆ. ಇದರಿಂದ 2017ರ ಜೂನ್ 6ರವರೆಗೆ (ಕಾಮಗಾರಿ ಪೂರ್ಣಗೊಳ್ಳುವವರೆಗೆ) ಪಡಿಬಾಗಿಲುವಿನಿಂದ ಉಕ್ಕುಡಕ್ಕೆ ತೆರಳಿ ಕನ್ಯಾನ ಸಂಚರಿಸುವಂತೆ ಅಧಿಸೂಚನೆ ಹೊರಡಿಸಲು ಲೋಪೋಪಯೋಗಿ ಇಲಾಖೆ ಜಿಲ್ಲಾಡಳಿತಕ್ಕೆ ಕೇಳಿಕೊಂಡಿತ್ತು.

ಜಾಹೀರಾತು

ಜಿಲ್ಲಾಧಿಕಾರಿ ಡಾ. ಕೆ ಜಿ ಜಗದೀಶ್ ಮೋಟಾರು ಕಾಯ್ದೆ 1988ರ ಸೆಕ್ಷನ್ 115 ಹಾಗೂ 1989ರ ನಿಯಮ 221ಎ(5)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಪಡಿಬಾಗಿಲು – ಬೈರಿಕಟ್ಟೆ ನಡುವೆ ವಾಹನ ಸಂಚಾರ ನಿಷೇಧಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಇಂಜಿನಿಯರ್, ಮಂಗಳೂರು ಪೊಲೀಸ್ ಅಧೀಕ್ಷಕರು, ಉಪ ಸಾರಿಗೆಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಡಳಿತದ ಕಡೆಯಿಂದ ಸೂಕ್ತ ಕ್ರಮಕ್ಕಾಗಿ ಅಧಿಸೂಚನೆ ಪ್ರತಿ ಕಳುಹಿಸಲಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.