ಬಂಟ್ವಾಳ

ವಿವೇಕಾನಂದ ಸಪ್ತಾಹ 12ರಿಂದ

ಸ್ವಾಮೀ ವಿವೇಕಾನಂದರ 154 ನೆ ಜನ್ಮ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕಿನ ವಿವೇಕಾನಂದ ಸಪ್ತಾಹವನ್ನು ಜ. 12 ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬೆಳಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ.

bantwalnews.com report

ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಪದವಿ ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.  ಜ. 13ರಂದು ವಾಮದ ಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾಷಣ ಸ್ಪರ್ಧೆ (ವಿಷಯ: ಸಾರ್ವತ್ರಿಕ ಸಾಕ್ಷರತೆಯಲ್ಲಿ ಯುವ ಜನತೆಯ ಪಾತ್ರ), ಕನ್ಯಾನ ಸರಕಾರಿ ಪದವಿ ಕಾಲೇಜಿನಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ, ಜ. 16ರಂದು ಸಿದ್ಧಕಟ್ಟೆ ಪದವಿ ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆ (ವಿಷಯ: ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ), ಕಾಮಾಜೆ ಸರಕಾರಿ ಪದವಿ ಕಾಲೇಜಿನಲ್ಲಿ ವಿವೇಕಾನಂದರ ಪೆನ್ಸಿಲ್ ಸ್ಕೆಚ್ ಚಿತ್ರ ಸ್ಪರ್ಧೆ, ಜ. 17ರಂದು ಸರಕಾರಿ ಪದವಿ ಕಾಲೇಜು ಮುಡಿಪುವಿನಲ್ಲಿ ರಸ ಪ್ರಶ್ನೆ ಸ್ಪರ್ಧೆ, ಎಸ್‌ವಿಎಸ್ ಬಂಟ್ವಾಳ ಕಾಲೇಜಿನಲ್ಲಿ ಆಶುಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಆಯಾಯ ಕಾಲೇಜಿನಲ್ಲಿ ಬೆಳಗ್ಗೆ 11 ಗಂಟೆಗೆ ಸ್ಪರ್ಧೆ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ