ಪುತ್ತೂರಿಂದ ಮೊಳಗಿತು ರೇಡಿಯೋ ಪಾಂಚಜನ್ಯ ಧ್ವನಿ

www.bantwalnews.com report

ಇನ್ನು ಪ್ರತಿದಿನ ಬೆಳಗ್ಗೆ ಪುತ್ತೂರು ಪರಿಸರದ ಜನರಿಗೆ ತಮ್ಮೂರ ವಿಚಾರಗಳನ್ನು 90.8 ಎಫ್.ಎಂ. ಮೂಲಕ ಕೇಳುವ ಅವಕಾಶ. ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ಅನ್ನು ಗುರುವಾರ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿಧ್ಯುಕ್ತವಾಗಿ ಚಾಲನೆ ನೀಡಿದರು.

ಜಾಹೀರಾತು

ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಮೂಲಕ ಜನಮನ ತಲುಪುತ್ತಿರುವಂತೆಯೇ ಪುತ್ತೂರು ಸುತ್ತಮುತ್ತಲಿನ ಮಂದಿಯ ಮನದಾಳದ ಮಾತು ಪಾಂಚಜನ್ಯದ ಮೂಲಕ ಮೊಳಗಲಿ ಈ ಸಂದರ್ಭ ಅವರು ಅಭಿಪ್ರಾಯಪಟ್ಟರು.

ಪಾಂಚಜನ್ಯದ ಹೆಸರನ್ನು ಕೇಳುವಾಗ ಭಗವಾನ್ ಶ್ರೀಕೃಷ್ಣ ಅಂತರಂಗಕ್ಕೆ ಬರುತ್ತಾನೆಅದನ್ನು ಕೇಳುವಾಗ ದೈವಿಕವಾದ ಅನುಭವವೊಂದು ನಮ್ಮದಾಗುತ್ತದೆ. ಹೀಗಿರುವಾಗ ಅದೇ ಹೆಸರಿನಲ್ಲಿ ಬಾನುಲಿ ಕೇಂದ್ರವೊಂದನ್ನು ಪ್ರಾರಂಭಿಸಿರುವುದು ರೊಮಾಂಚನಕಾರಿ ಸಂಗತಿ, ಕೇಂದ್ರದ ಸಿಗ್ನೇಚರ್ ಟ್ಯೂನ್ ಮನೋಜ್ಞವಾಗಿದೆ ಎಂದು ಸಚಿವೆ ಶ್ಲಾಘಿಸಿದರು.

 

ಜಾಹೀರಾತು

ಪಾಂಚಜನ್ಯದ ಕಾರ್ಯವೈಖರಿ ಬಗೆಗೆ ವಿವೇಕಾನಂದ ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಸಚಿವರಿಗೆ ವಿವರಿಸಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ನಿರ್ದೇಶಕ ವಾಮನ ಪೈ, ಡಾ.ಕಮಲಾ ಪ್ರಭಾಕರ ಭಟ್, ಪಾಂಚಜನ್ಯ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಕುಂಟಿನಿ, ಕಾರ್ಯದರ್ಶಿ ಶ್ರೀಕಾಂತ್ ಕೊಳತ್ತಾಯ, ಸದಸ್ಯ ಬಿ.ಟಿ.ರಂಜನ್, ಸಿಗ್ನೇಚರ್ ಹಾಡು ಬರೆದ ಕವಿ ಸುಬ್ರಾಯ ಚೊಕ್ಕಾಡಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುತ್ತೂರಿಂದ ಮೊಳಗಿತು ರೇಡಿಯೋ ಪಾಂಚಜನ್ಯ ಧ್ವನಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*