ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ಜನವರಿ ೧೫ರಂದು ಮಧುಮೇಹ ತಪಾಸಣಾ ಉಚಿತ ಶಿಬಿರ ನಡೆಯಲಿದೆ.
ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ರವರೆಗೆ ನಡೆಯುವ ಶಿಬಿರವನ್ನು ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಕುಮಾರ ಪೂಂಜ ಉದ್ಘಾಟಿಸುವರು. ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ ವಿಶ್ವಕರ್ಮ ಉಪಸ್ಥಿತರಿರುವರು. ಈ ಸಂದರ್ಭ ತಜ್ಞ ವೈದ್ಯರಾದ ಡಾ. ಮಹೇಶ್ ಟಿ.ಎಸ್, ಡಾ.ಶ್ರೀವಿದ್ಯಾ ಎಂ, ಹಾಜರಿರುವರು ಎಂದು ನಮ್ಮ ಆಯುರ್ವೇದ ಬಳಗದ ಪ್ರಕಟಣೆ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಮಧುಮೇಹ ಉಚಿತ ತಪಾಸಣಾ ಶಿಬಿರ 15 ರಂದು"