ಇಂದು ಕೃಷಿ ಉತ್ಸವ ಸಮಾರೋಪ

bantwalnews.com report

ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿ ಎರಡು ದಿನಗಳ ಕಾಲ ನಡೆಯುವ ಕೃಷಿ ಉತ್ಸವ ಸಮಾರೋಪ ಗುರುವಾರ ನಡೆಯಲಿದೆ.

ಜಾಹೀರಾತು

2ರಂದು ನಡೆಯಲಿರುವ ವ್ಯಸನಮುಕ್ತ ಕುಟುಂಬ ವಿಚಾರಗೋಷ್ಠಿಯಲ್ಲಿ ದ.ಕ ಜಿ. ಪಂ.ನ ಸದಸ್ಯ ಮಂಜುಳಾ ಮಾಧವ ಮಾವೆ ಅಧ್ಯಕ್ಷತೆ ವಹಿಸಲಿದ್ದು, ಧರ್ಮಸ್ಥಳ ಜ.ಜಾ.ವೇ.. ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ವಿಷಯ ಮಂಡನೆ ಮಾಡಲಿದ್ದಾರೆ. ಪಾರ್ವತಿ ವಿಟ್ಲ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಂಟ್ವಾಳ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎ.ಸಿ. ಭಂಡಾರಿ, ಜಿ.ಪಂ.ನ ಸದಸ್ಯ ಮಮತಾ ಗಟ್ಟಿ, ಮಾಜಿ ಜಿ. ಪಂ.ನ ಸದಸ್ಯ ಸುಲೋಚನಾ ಜಿ.ಕೆ ಭಟ್ ಉಪಸ್ಥಿತರಿರುವರು.

ಸಮಗ್ರ ತೋಟಗಾರಿಕಾ ಬೆಳೆಗಳು ವಿಚಾರ ಗೋಷ್ಠಿಯಲ್ಲಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಎಚ್. ಆರ್ ಯೋಗೀಶ್ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ತಾಂತ್ರಿಕ ಅಧಿಕಾರಿ ಪುರಂದರ ವಿಷಯ ಮಂಡನೆ ಮಾಡಲಿದ್ದಾರೆ. ಪ್ರಗತಿಪರ ಕೃಷಿಕ ಬಿ.ಎಸ್. ಚೆನ್ನಪ್ಪ ಪೂಜಾರಿ, ಜಿ.ಪಂ.ನ ಸದಸ್ಯ ಪದ್ಮಶೇಖರ ಜೈನ್, ಜಯಶಂಕರ ಬಾಸ್ರಿತ್ತಾಯ, ಬಂಟ್ವಾಳ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಕಿರಣ ಹೆಗ್ಡೆ ಉಪಸ್ಥಿತರಿರುವರು

ಲಾಭದಾಯಕ ಹೈನೋದ್ಯಮ ವಿಚಾರ ಗೋಷ್ಠಿಯಲ್ಲಿ ಮಾಣಿ ಪಶುವೈದ್ಯ ಆಸ್ಪತ್ರೆಯ ಸಕಾಯಕ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಟಿ.ಜಿ.ಅಧ್ಯಕ್ಷತೆ ವಹಿಸಲಿದ್ದು, ಬೆಂಜನಪದವು ಪಶುವೈದ್ಯಾಧಿಕಾರಿ ಡಾ. ರವಿಕುಮಾರ್ ಎಂ ವಿಷಯ ಮಂಡನೆ ಮಾಡಲಿದ್ದಾರೆ. ಪ್ರಗತಿಪರ ಕೃಷಿಕ ಸುರೇಶ ಗೌಡ ಪುಣಚ, ಜಿ.ಪಂ.ನ ಸದಸ್ಯ ಎಂ.ಎಸ್. ಮಹಮ್ಮದ್, ಬಂಟ್ವಾಳ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಬಂಟ್ವಾಳ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಉಮೇಶ ಆಚಾರ್ಯ ಉಪಸ್ಥಿತರಿರುವರು.

ಜಾಹೀರಾತು

ಸಂಜೆ ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ಕೃಷಿ ಉತ್ಸವ ಸಮಿತಿಯ ಅಧ್ಯಕ್ಷ ರೊನಾಲ್ಡ್ ಡಿ’ಸೋಜಾ ಅಧ್ಯಕ್ಷತಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆಹಾರ ಸಚಿವ ಯು.ಟಿ.ಖಾದರ್, ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ.ಶೆಟ್ಟಿ, ದ.ಕ ಜಿ.ಪಂ.ನ ಮೀನಾಕ್ಷಿ ಶಾಂತಿಗೋಡು, ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆ, ಶ್ರೀ.ಕ್ಷೇ.ಧ. ಗ್ರಾ. ಯೋಜನೆಯ ಕಾರ್ಯನಿರ್ವಾಹಕ ನಿದೇರ್ಶಕ ಎಲ್.ಎಚ್. ಮಂಜುನಾಥ್, ಬಂಟ್ವಾಳ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಕಾಶ್ ಕಾರಂತ್, ಮಂಗಳೂರು ಕ್ಯಾಂಪ್ಕೊ ಲಿಮಿಟೆಡ್‌ನ ಅಧ್ಯಕ್ಷ ಎಸ್. ಸತೀಶ್‌ಚಂದ್ರ, ಬಂಟ್ವಾಳದ ಸೇಸಪ್ಪ ಕೋಟ್ಯಾನ್, ನರಿಕೊಂಬುವಿನ ಅಧ್ಯಕ್ಷ ನಿತ್ಯಾನಂದ ಸಪಲ್ಯ, ಬಂಟ್ವಾಳ ರೋಟರಿ ಕ್ಲಬ್ ನ ಅಧ್ಯಕ್ಷ ರಿತೇಶ್ ಬಾಳಿಗಾ, ಸದಾನಂದ ಗೌಡ ಉಪಸ್ಥಿತರಿರುವರು. ಚಿಣ್ಣರ ಲೋಕ ತಂಡದಿಂದ ರಸಮಂಜರಿ ಕಾರ್ಯಕ್ರಮ ಹಾಗೂ ಬಿ.ಸಿ.ರೋಡಿನ ಎಕ್ಟ್ರೀಮ್ ಡ್ಯಾನ್ಸ್ ಕ್ರೀವ್ಸ್‌ರವರಿಂದ ನೃತ್ಯ ವೈವಿಧ್ಯ ನಡೆಯಲಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇಂದು ಕೃಷಿ ಉತ್ಸವ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*