ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿವೇಕಾನಂದ ಜನ್ಮದಿನಾಚರಣೆ

bantwalnews.com

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ನಡೆಯಿತು.

ಜಾಹೀರಾತು

ಅಧ್ಯಾಪಕ ಸುಮಂತ್ ವಿವೇಕಾನಂದರು ನಡೆದ ಬಂದ ದಾರಿ ಮತ್ತು ಅವರ ಜೀವನದ ಘಟನೆಗಳನ್ನು ತಿಳಿಸಿದರು. ನಾಲ್ಕನೇ ತರಗತಿ ವಿದ್ಯಾರ್ಥಿಗಳ ಅನನ್ಯ ಮತ್ತು ಶ್ರಮಿಕ ವಿವೇಕಾನಂದರ ಬಗ್ಗೆ ತಮಗೆ ತಿಳಿದ ವಿಷಯಗಳನ್ನು ಹಂಚಿಕೊಂಡರು.

ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ಭಾಷಣ, ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಗಿರಿ ಸತೀಶ್ ಭಟ್, ಮಾತೃಭಾರತಿ ಅಧ್ಯಕ್ಷೆ ಅರುಣೋದಯ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಗಿಲ್ಕಿಂಜ ಕೃಷ್ಣ ಭಟ್, ಚಂದ್ರಶೇಖರ ಸಾಲಿಯಾನ್, ರಾಕೋಡಿ ಈಶ್ವರ ಭಟ್ ಹಾಗೂ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಅನ್ನಪೂರ್ಣ ನಿರೂಪಿಸಿ, ಚಂದ್ರಹಾಸ ಸ್ವಾಗತಿಸಿದರು.

ಜಾಹೀರಾತು

ಸ್ವಚ್ಛತಾ ಕಾರ್ಯಕ್ರಮ

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶ್ರೀರಾಮ ಪದವಿ ಪೂರ್ವ ಕಾಲೇಜಿನ ಮುಂಭಾಗದಲ್ಲಿರುವ ವಿವೇಕಾನಂದರ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್‍ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾಕೇಂದ್ರದಲ್ಲಿ ಸ್ವಚ್ಚತಾಕಾರ್‍ಯ ನಡೆಸಿ ನಂತರ ಸುಧೆಕಾರ್‌ನಲ್ಲಿರುವ ಕೃಷಿ ಕೇಂದ್ರದಲ್ಲಿ ಶ್ರಮದಾನ ಮಾಡಲಾಯಿತು.

ವಿದ್ಯಾಕೇಂದ್ರದಸಂಚಾಲಕ ವಸಂತ ಮಾಧವ, ಕೋಶಾಧಿಕಾರಿ ಸತೀಶ್ ಭಟ್ ಶಿವಗಿರಿ, ಕಾಲೇಜು ಅಭಿವೃದ್ಧಿ ಸಮಿತಿ ಕಾರ್‍ಯದರ್ಶಿ ಚಿತ್ತರಂಜನ್ ಹೊಸಕಟ್ಟ, ಹಾಗೂ ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ, ಮಾತೃಭಾರತಿ, ಶ್ರೀರಾಮ ಪ್ರೌಢಶಾಲಾಭಿವೃದ್ಧಿ ಸಮಿತಿ, ಶ್ರೀರಾಮ ಕಾಲೇಜುಅಭಿವೃದ್ಧಿ ಸಮಿತಿ ಮತ್ತು ಶ್ರೀರಾಮ ಸೌಹಾರ್ದ ಸಹಕಾರಿ ನಿ. ಸದಸ್ಯರು, ಪ್ರಾಥಮಿಕ ಶಾಲೆ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಶ್ರೀರಾಮ ಪದವಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು, ಅಧ್ಯಾಪಕರು, ಶಾಲಾ ವಾಹನ ಚಾಲಕರು ಭಾಗವಹಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿವೇಕಾನಂದ ಜನ್ಮದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*