ಭಾರತೀಯ ಮೌಲ್ಯ ಪ್ರತಿಪಾದಕ ಸ್ವಾಮಿ ವಿವೇಕಾನಂದ

ಭಾರತೀಯ ಮೌಲ್ಯಗಳನ್ನು ಸಮರ್ಥವಾಗಿ ಬಿಂಬಿಸಿದವರು ಸ್ವಾಮಿ ವಿವೇಕಾನಂದ. ಹಿಂದೂ ಸನಾತನ ಧರ್ಮವನ್ನು ಪ್ರಪಂಚಕ್ಕೆ ತೊರಿಸಿಕೊಟ್ಟವರೂ ಅವರೇ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

 

ಜಾಹೀರಾತು

www.bantwalnews.com report

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಗುರುವಾರ ಆಯೋಜಿಸಲಾದ ವಿವೇಕಾನಂದ ಜಯಂತಿ ಆಚರಣೆಯನ್ನು ಹಾಗೂ ರೇಡಿಯೋ ಪಾಂಚಜನ್ಯ ಬಾನುಲಿ ಕೇಂದ್ರವನ್ನು ಉದ್ಘಾಟಿಸಿ ನಿರ್ಮಲಾ ಸೀತಾರಾಮನ್ ಮಾತನಾಡಿದರು.

ಜಾಹೀರಾತು

ಹಿಂದೂ ಎಂದರೆ ಅದೊಂದು ಜೀವನ ಮಾರ್ಗ ಎನ್ನುವುದನ್ನು ಈ ದೇಶ ಸರ್ವೋಚ್ಛ ನ್ಯಾಯಾಲಯವೇ ಅಭಿಪ್ರಾಯಿಸಿದೆ. ಹಿಂದೂ ಜೀವನದ ಸಕಲ ಸಾರಗಳನ್ನು ಪ್ರತಿಯೊಬ್ಬರೂ ತಿಳಿದಿರಬೇಕಾದ ಅಗತ್ಯವಿದೆ. ಆ ಕುರಿತು ಮಾತನಾಡುವ ಆತ್ಮಸ್ಥೈರ್ಯವನ್ನೂ ಬೆಳೆಸಿಕೊಳ್ಳಬೇಕಿದೆವಿವೇಕಾನಂದರು ಹೇಳಿದ ವಿಚಾರಗಳು ಸನಾತನ ಸಂಸ್ಕೃತಿಯ ಸಾರ ಎಂದರು.

ದಿಕ್ಸೂಚಿ ಭಾಷಣ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹಪ್ರಚಾರ ಪ್ರಮುಖ್ ಪ್ರದೀಪ್, ಸ್ವಾಮಿ ವಿವೇಕಾನಂದರ ಬದುಕಿನ ಅಧ್ಯಯನವನ್ನು ಪ್ರತಿಯೊಬ್ಬನೂ ನಡೆಸಬೇಕು. ವಿವೇಕಾನಂದರ ಜೀವನ ಇಂದಿಗೂ ಪ್ರಸ್ತುತವಾಗಿರುವುದು ಗಮನಾರ್ಹ. ತಾನು ಹೇಳಿದ ಸಂಗತಿಗಳನ್ನು ಪ್ರಾಯೋಗಿಕವಾಗಿಯೂ ಮಾಡಿತೋರಿಸಿದ ಧೀಮಂತ ಅವರು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ನಮ್ಮ ದೇಶವನ್ನು ಸಂತರು, ಸನ್ಯಾಸಿಗಳು ಹೊರಗಿನಿಂದ ರಕ್ಷಿಸಿದರೆ ತಾಯಂದಿರು ಒಳಗಿನಿಂದ ಕಾಪಾಡುತ್ತಿದ್ದಾರೆ. ಆದರೆ ದುರಂತವೆಂದರೆ ಈ ಎರಡೂ ವರ್ಗಗಳನ್ನು ಹಾದಿತಪ್ಪಿಸುವ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ನಮ್ಮದು ಪುರುಷ ಪ್ರಧಾನ ಸಮಾಜವೆಂಬ ತಪ್ಪು ಕಲ್ಪನೆ ನಮ್ಮಲ್ಲಿದೆ. ನಿಜವಾಗಿ ಇದು ಮಾತೃಪ್ರಧಾನ ವ್ಯವಸ್ಥೆ ಎಂದು ಹೇಳಿದರು.

ಜಾಹೀರಾತು

ಪ್ರಧಾನಿ ನರೇಂದ್ರ ಮೋದಿಯವರು ನೋಟು ಅಮಾನ್ಯೀಕರಣದ ಬಗೆಗೆ ಮಾತನಾಡಿದ ಸಂಗತಿಗಳ ಕಿರು ಹೊತ್ತಗೆಯನ್ನು ಬಿಡುಗಡೆಗೊಳಿಸಲಾಯಿತು ಮತ್ತು ಮೋದಿಯವರ ಮಾತುಗಳನ್ನು ಧ್ವನಿವರ್ಧಕದಲ್ಲಿ ಕೇಳಿಸಲಾಯಿತು. ವಿವೇಕಾನಂದ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ಬಹುಮಾನವನ್ನು ನಳಿನ್ ಕುಮಾರ್ ಕಟೀಲ್ ವಿತರಿಸಿದರು.

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ವಿವೇಕಾನಂದ ಕಾಲೇಜಿನ ಸ್ಥಾಪಕ ಸಂಚಾಲಕ  ಕೆ.ರಾಮ ಭಟ್, ರೇಡಿಯೋ ಪಾಂಚಜನ್ಯ ಸಮಿತಿಯ ಕಾರ್ಯದರ್ಶಿ ಶ್ರೀಕಾಂತ್ ಕೊಳತ್ತಾಯ ಉಪಸ್ಥಿತರಿದ್ದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಂಕಿತಾ, ಭೂಮಿಕಾ, ಪ್ರಣಮ್ಯ ಹಾಗೂ ವೈಣವಿ ಪ್ರಾರ್ಥಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಪ್ರಸ್ತಾವನೆಗೈದು, ಸ್ವಾಗತಿಸಿದರು. ರೇಡಿಯೋ ಪಾಂಚಜನ್ಯದ ಅಧ್ಯಕ್ಷ ಗೋಪಾಕೃಷ್ಣ ಕುಂಟಿನಿ ವಂದಿಸಿದರು. ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣೀಜ್ಯ ವಿಭಾಗದ ಮುಖ್ಯಸ್ಥೆ ವಿಜಯ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷೆ ಡಾ.ಸುಧಾ ಎಸ್ ರಾವ್ ಅತಿಥಿಗಳನ್ನು ಪರಿಚರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಾರತೀಯ ಮೌಲ್ಯ ಪ್ರತಿಪಾದಕ ಸ್ವಾಮಿ ವಿವೇಕಾನಂದ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*