ಜಿಲ್ಲಾ ಸುದ್ದಿ

ಆಳ್ವಾಸ್ ವಿರಾಸತ್ ವೈಭವ ಆರಂಭ

bantwalnews.com report

ಪುತ್ತಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಬಯಲು ರಂಗಮಂದಿರದಲ್ಲಿ ಆಳ್ವಾಸ್ ವಿರಾಸತ್ 2017 ಆರಂಭಗೊಂಡಿದೆ.

ಜಾಹೀರಾತು

23ನೇ ವರ್ಷದ ಆಳ್ವಾಸ್ ವಿರಾಸತ್‌ನ ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಸಾಂಪ್ರದಾಯಿಕ ವರ್ಣರಂಜಿತ ಮೆರವಣಿಗೆಗೆ ಚಾಲನೆ ದೊರಕಿತು.

ಶಂಖದ ನಾದ, ಕೊಂಬಿನ ಮೈನವಿರೇಳಿಸುವ ಧ್ವನಿ, ಇವುಗಳ ಮಧ್ಯೆ ಮಂಗಳೂರಿನ ಚೆಂಡೆ ವಾದನದ ಸೊಗಸು ನೆರೆದವರ ಮನಸೂರೆಗೊಳಿಸಿತು. ಶ್ರೀಲಂಕಾದ ನೃತ್ಯ ಕಲಾವಿದರು, ಕಲಶ, ಸಾಕ್ಸೊಪೋನ್ ಹಾಗೂ ಕದಾನಿ, ವಿವಿಧ ರಾಜ್ಯಗಳ ವೈವಿದ್ಯಮಯ ಕಲಾಪ್ರಕಾರಗಳನ್ನು ಮೆರವಣಿಗೆಯಲ್ಲಿ ಪರಿಚಯಿಸಲಾಯಿತು.  ಸುಮಾರು 9 ಕಲಾಪ್ರಕಾರಗಳು ಮೆರವಣೀಗೆಯಲ್ಲಿ ಪ್ರದರ್ಶನ ನೀಡಿ ಸಭಿಕರ ಗಮನಸೆಳೆದರು.

ಆಳ್ವಾಸ್ ವಿರಾಸತ್‌ಗಾಗಿ ಸಿದ್ಧಗೊಂಡಿರುವ ಪ್ರಶಾಂತ ವಾತಾವರಣದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಗುತ್ತಿನ ಮನೆಯ ಪ್ರವೇಶಧ್ವಾರ ಆವರಣದಿಂದ ಆರಂಭಗೊಂಡ ಕಲಾ ಮೆರವಣಿಗೆ ಸುಮಾರು 15 ನಿಮಿಷ ಹೊಸ ಸಾಂಸ್ಕೃತಿಕ ಲೋಕವನ್ನು ಸೃಷ್ಟಿ ಮಾಡಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.