ಜಿಲ್ಲಾ ಸುದ್ದಿ

ಇಂದು ವಿವೇಕ್ ಉದ್ಯೋಗ ಮೆಗಾ ಮೇಳ

  • 150ಕ್ಕೂ ಅಧಿಕ ಕಂಪನಿಗಳ ಭಾಗಿ
  • ಸ್ವೋದ್ಯೋಗ ಮಾಹಿತಿ, ತರಬೇತಿ
  • ಕೇಂದ್ರ ಸಚಿವ ರಾಜೀವ ಪ್ರತಾಪ್ ರೂಡಿ ಉದ್ಘಾಟನೆ

 bantwalnews.com report

13ರಂದು ಶುಕ್ರವಾರ ಪುತ್ತೂರು ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ನೂತನ ಕಟ್ಟಡ ಉದ್ಘಾಟನೆ ವಿವೇಕಾನಂದ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೇಂದ್ರ ಉದ್ಘಾಟನೆ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿದೆ.

ಬಳಿಕ 10 ಗಂಟೆಗೆ ವಿವೇಕಾನಂದ ಕ್ಯಾಂಪಸ್ ನ ಕೇಶವ ಸಂಕಲ್ಪದಲ್ಲಿ ವಿವೇಕ ಉದ್ಯೋಗ ಮೇಳ 2017 ಮೆಗಾ ರಿಕ್ರೂಟ್ ಮೆಂಟ್ ಈವೆಂಟ್ ನಡೆಯಲಿದೆ. ಕಟ್ಟಡ, ಉದ್ಯೋಗ ಮೇಳವನ್ನು ಕೇಂದ್ರ ವಾಣಿಜ್ಯೋದ್ಯಮ ಮತ್ತು ಕೌಶಲಾಭಿವೃದ್ಧಿ ಸಚಿವ ರಾಜೀವ ಪ್ರತಾಪ್ ರೂಡಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಡಾ. ಕಲ್ಲಡ್ಕ ಪ್ರಭಾಕರ ಭಟ್ ವಹಿಸುವರು. ತರಬೇತಿ ಕೇಂದ್ರವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು ಎಂದು ಅವರು ಹೇಳಿದರು. ಇದೇ ವೇಳೇ ವಿವೇಕಾನಂದ ಕ್ಯಾಂಪಸ್ ನಲ್ಲಿ ಪೂರ್ವಾಹ್ನ 11.30ಕ್ಕೆ ಲಘು ಉದ್ಯೋಗ ಭಾರತಿ ಸಹಯೋಗದಲ್ಲಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಜಾಹೀರಾತು

ಉದ್ಯೋಗ ಮೇಳಕ್ಕೆ ಉಚಿತ ಬಸ್

ಶಿಬಾಜೆ, ಉಜಿರೆ, ಪುಂಜಾಲಕಟ್ಟೆಎ, ಗುಂಡ್ಯ, ಕೊಂಬಾರು, ಕಡಬ, ಕಲ್ಲುಗುಡ್ಡೆ, ಇಳಂತಿಲ, ಸುಬ್ರಹ್ಮಣ್ಯ, ಎಡಮಂಗಲ, ಪೆರ್ಲಂಪಾಡಿ, ಪಾಣಾಜೆ, ಬಿಳಿಯೂರು, ಕುದ್ದುಪದವು, ಸಾಲೆತ್ತೂರು, ಮಂಚಿ, ಪೊಳಲಿ, ಬದುಯಡ್ಕ, ಈಶ್ವರಮಂಗಲ, ಕಲ್ಲಡ್ಕ, ದರ್ಬೆ, ಸುಳ್ಯ, ಎಲಿಮಲೆ, ಬೆಳ್ಳಾರೆ, ಮಂಗಳೂರು, ಕಲ್ಮಡ್ಕ, ಆಲಂಕಾರು, ಒಡಿಯೂರು ಹೀಗೆ ಒಟ್ಟು 28 ಕೇಂದ್ರಗಳಿಂದ ಬೆಳಗ್ಗೆ 7.30ಕ್ಕೆ ಬಸ್ ವ್ಯವಸ್ಥೆ ಇದ್ದು, ಸಂಜೆ 5ಕ್ಕೆ ಅದೇ ಜಾಗಗಳಿಗೆ ಕಾಲೇಜಿನಿಂದ ಹೊರಡುವುದು .

ಪ್ರಾಥಮಿಕ, ಪ್ರೌಢ ಶಿಕ್ಷಣದಿಂದ ತೊಡಗಿ, ಸ್ನಾತಕೋತ್ತರ, ವೃತ್ತಿಪರ ಶಿಕ್ಷಣ ಹೊಂದಿದರವು ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ. ಸ್ವೋದ್ಯೋಗಕ್ಕೂ ಇಲ್ಲಿ ಮಾಹಿತಿ ನೀಡುವ ವ್ಯವಸ್ಥೆ ಇದೆ .

for more info about udyoga mela  http://www.vivekaudyoga.com

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts