ಕಲ್ಲಡ್ಕ

ಗೃಹರಕ್ಷಕ ಸಿಬ್ಬಂದಿಯಿಂದ ನರಹರಿ ಪರ್ವತದಲ್ಲಿ ಸ್ವಚ್ಛತಾ ಅಭಿಯಾನ

ಬಂಟ್ವಾಳ ಗೃಹರಕ್ಷಕ ದಳದ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಸಮೀಪ ನರಹರಿ ಪರ್ವತದಲ್ಲಿ ಶ್ರಮದಾನ ನಡೆಸಿ, ಪರಿಸರ ಸ್ವಚ್ಛಗೊಳಿಸಿದರು.

ಜಾಹೀರಾತು

ಸುಮಾರು ಐವತ್ತರಷ್ಟಿದ್ದ ಸಿಬ್ಬಂದಿ, ಶ್ರೀ ಸದಾಶಿವ ದೇವಸ್ಥಾನಕ್ಕೆ ತೆರಳುವ ಮೆಟ್ಟಿಲುಗಳನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟಗೊಳಿಸಿದರು. ಇದೇ ಸಂದರ್ಭ ಎಪಿಎಂಸಿ ಚುನಾವಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಡಾ.ಮುರಲೀ ಮೋಹನ ಚೂಂತಾರು, ಬಂಟ್ವಾಳ ಗೃಹರಕ್ಷಕ ದಳದ ಘಟಕಾಧಿಕಾರಿ ಡಿ.ಆರ್.ಶ್ರೀನಿವಾಸ ಆಚಾರ್ಯ, ಕ್ಯಾನ್ ಪಾಲ್ ಕಾರ್ಯದರ್ಶಿ ಎ.ಎಸ್.ಭಟ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದು, ಮಾರ್ಗದರ್ಶನ ನೀಡಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts