ಫರಂಗಿಪೇಟೆ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ರವಿವಾರ ಉಚಿತ ಮಧುಮೇಹ ತಪಾಸಣಾ ಶಿಬಿರ ನಡೆಯಿತು.
www.bantwalnews.com report
ಶಿಬಿರವನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕ್ರಷ್ಣ ಕುಮಾರ್ ಪೂಂಜ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಭಾಗವಹಿಸಿದರು.
ಈ ಸಂದರ್ಭದಲ್ಲಿ ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯದ ವೈದರಾದ ಡಾ. ಮಹೇಶ್ ಟಿ.ಎಸ್., ಡಾ. ಶ್ರೀವಿದ್ಯಾ ಎಂ., ಫರಂಗಿಪೇಟೆ ಶ್ರೀಲಕ್ಷ್ಮಿ ಕ್ಲಿನಿಕಲ್ ಲ್ಯಾಬ್ ಮಾಲೀಕರಾದ ಧನಲಕ್ಷ್ಮಿ, ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ರಾಜಶ್ರೀ, ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ, ಪ್ರಮುಖರಾದ ಮುಹಮ್ಮದ್ ಹುಸೈನ್ ಉಪಸ್ಥಿತರಿದ್ದರು.
ಬೆಳಗ್ಗೆಯಿಂದ ಸಂಜೆವರೆಗೆ ನಡೆದ ಈ ಶಿಬಿರದಲ್ಲಿ ಫರಂಗಿಪೇಟೆ ಮತ್ತು ಸುತ್ತಮುತ್ತಲಿನ ಹಲವಾರು ಮಂದಿ ಮಧುಮೇಹ ತಪಾಸಣೆ ನಡೆಸುವ ಮೂಲಕ ಶಿಬಿರದ ಪ್ರಯೋಜನ ಪಡೆದರು. ಪತ್ರಕರ್ತ ಹರೀಶ್ ಮಾಂಬಾಡಿ ಸ್ವಾಗತಿಸಿ, ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…