ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಮಣ್ಣ ಗೌಡ (70) ಬೈಕ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ.
www.bantwalnews.com report
ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಮಣ್ಣ ಗೌಡ(70) ಮೃತಪಟ್ಟವರು. ಇವರು ಸೋಮವಾರ ರಾತ್ರಿ ಕೋಲ್ಪೆ ಸಮೀಪ ಇರುವ ತನ್ನ ಮಗಳ ಮನೆಯಿಂದ ಅಳಕೆಮಜಲು ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಳಕೆಮಜಲು ಕಡೆಯಿಂದ ಕೋಲ್ಪೆ ಕಡೆಗೆ ತೆರಳುತ್ತಿದ್ದ ಬೈಕ್ ಪಿಕಪ್ ವಾಹನವನ್ನು ಓವರ್ಟೇಕ್ ಮಾಡುವ ಭರದಲ್ಲಿ ರಾಮಣ್ಣ ಗೌಡರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎದೆಗೆ ಹಾಗೂ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…