bantwalnews.com report
ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ನಿವೃತ್ತ ಯೋಧ ಅಬ್ದುಲ್ ಖಾದರ್ ಯಾನೆ ಮಿಲಿಟ್ರಿ ಖಾದ್ರಿಯಾಕ(77) ಭಾನುವಾರ ಮುಂಜಾನೆ ಸ್ವ ಗೃಹದಲ್ಲಿ ಹೃದಯಾಘಾತದಿಂದ ಮೃತರಾಗಿದ್ದಾರೆ.
1961ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಅವರು ಇಂಡೋ – ಟಿಬೇಟ್ ಯುದ್ಧದ ಸಮಯದಲ್ಲಿ ಸೇನೆಯಲ್ಲಿ ಬ್ರಿಗೇಡಿಯರ್ ಆಗಿ ಸೇವೆ ಸಲ್ಲಿಸಿದ್ದರು.
ನಿವೃತ್ತ ಹೆಡ್ ಕಾನ್ಸ್ಟೇಬಲ್ ನೆಹರೂ ನಗರ ನಿವಾಸಿ ಕೆ.ಅಬ್ದುಲ್ ಹಮೀದ್ ಅವರ ಸಹೋದರರಾಗಿರುವ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
……………………………….
ಬಾಬು ಗೌಡ ಮತ್ತಾವು
ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಮತ್ತಾವು ನಿವಾಸಿ, ಪ್ರಗತಿಪರ ಕೃಷಿಕ ಬಾಬು ಗೌಡ (82) ಇವರು ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿದ್ದು, ಉತ್ತಮ ಹೈನುಗಾರರಾಗಿಯೂ ಗುರುತಿಸಿಕೊಂಡಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…