ಬಂಟ್ವಾಳ

ಎಸ್.ವಿ.ಎಸ್.ಕಾಲೇಜಲ್ಲಿ ಯುಜಿಸಿ ಪ್ರಾಯೋಜಿತ ಕಾರ್ಯಾಗಾರ

ಪ್ರಸಕ್ತ ದಿನಗಳಲ್ಲಿ ಕಚೇರಿ ಕಾರ್ಯಗಳ ಅಭಿವೃದ್ಧಿ ಮತ್ತು ಆಧುನಿಕ ತಂತ್ರಜ್ಞಾನವನ್ನು ಕಛೇರಿಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಯು.ಜಿ.ಸಿ ಪ್ರಾಯೋಜಿತ ಒಂದು ದಿನದ ವಿ.ವಿ. ಮಟ್ಟದ ಕಾರ್ಯಾಗಾರ ದಿನಾಂಕ 21 ರಂದು ನಡೆಯಲಿದೆ.

www.bantwalnews.com report

ಡೆವಲಪ್ಪಿಂಗ್ ಎಡ್ವಾನ್ಸ್‌ಡ್ ಸ್ಕಿಲ್ಸ್ ಪಾರ್ ಎಡ್‌ಮಿನಿಸ್ಟ್ರೇಟಿವ್ ಸ್ಟಾಫ್ ಎಂಬ ವಿಷಯದ ಕುರಿತು ನಡೆಯುವ ಈ ಕಾರ್ಯಾಗಾರವನ್ನು ಕಾಲೇಜಿನ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಜಂಟಿ ನಿದೇಶಕರಾದ ಅಕ್ಬರ್ ಹುಸೈನ್ ಫಾರೂಕ್ ಉದ್ಘಾಟಿಸಲಿದ್ದಾರೆ.

ಜಾಹೀರಾತು

ಪ್ರಥಮ ದರ್ಜೆ ಕಾಲೇಜುಗಳ ಕಛೇರಿ ಸಿಬ್ಬಂದಿಗೆ  ನಡೆಯುವ ಈ ಕಾರ್ಯಗಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಸಹಾಯಕ ನಿರ್ದೇಶಕ. ಪಾವುಲ್ ಸ್ವಾಮಿ, ಲೆಕ್ಕಾಧಿಕಾರಿ ಗಣೇಶ್ ನಾಯಕ್, ಎಸ್.ವಿ.ಎಸ್ ಕಾಲೇಜಿನ ಗ್ರಂಥಪಾಲಕರಾದ ಡಾ. ಎಚ್.ಆರ್ ಸುಜಾತ, ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾದ ಪ್ರೊ. ಸುಪರ್ಣಾ ರೈ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಪಾಂಡುರಂಗ ನಾಯಕ್ ಮತ್ತು ಕಾರ್ಯಾಗಾರದ ಸಂಯೋಜಕರಾದ . ಬಿ. ರಾಧೇಶ್ ಕುಮಾರ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ