ವಿಟ್ಲ

ಶಂಭು ಶರ್ಮ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ

ಯಕ್ಷಗಾನ ಅವಿನಾಶಿ, ಅಮರ, ಚಿರಂತನ ಸ್ಫೂರ್ತಿಯ ಚಿಲುಮೆ ಎಂದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗಂಗಾಧರ ಭಟ್ ಹೇಳಿದರು.

https://bantwalnews.comreport

ಜಾಹೀರಾತು

 ವಿಟ್ಲದಲ್ಲಿ ಯಕ್ಷಗಾನ ಬಯಲಾಟ ಅಕಾಡಮಿ ಬೆಂಗಳೂರು ಸಹಯೋಗದೊಂದಿಗೆ ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾದ ಯಕ್ಷ ಶಿಕ್ಷಣತರಬೇತಿ ಸಮಾರೋಪ ಸಮಾರಂಭ, ಯಕ್ಷ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಬಯಲಾಟ, ಪ್ರಸಿದ್ಧ ಅರ್ಥಧಾರಿ ಶಂಭು ಶರ್ಮ ವರಿಗೆ ಯಕ್ಷ ಸಿಂಧೂರಪ್ರಶಸ್ತಿ ಪ್ರಧಾನ ಮತ್ತು ವಿಠಲ ಮಂದಿರದ ಅರ್ಚಕ ಕಲಾಭಿಮಾನಿ ರಾಮಮೂರ್ತಿ ಕೆದಿಲಾಯರಿಗೆ ಕಲಾ ಪೋಷಕ ಪುರಸ್ಕಾರಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

 ಬೆಂಗಳೂರು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿ ಸದಸ್ಯ ತಾರಾನಾಥ ಬಲ್ಯಾಯ, ಕಲಾವಿದ ರಾಧಾಕೃಷ್ಣ ಕಲ್ಚಾರ್, ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ದಿನೇಶ್ ಮಾಮೇಶ್ವರ ಭಾಗವಹಿಸಿದ್ದರು.

ವಿಟ್ಲ ಮಂಗೇಶ್ ಭಟ್ ಅಭಿನಂದನಾ ಭಾಷಣ ಮಾಡಿದರು. ಯಕ್ಷ ಸಿಂಧೂರ ಪ್ರತಿಷ್ಠಾನದ ಸಂಚಾಲಕ ಸಿ ಹೆಚ್ ಸುಬ್ರಹ್ಮಣ್ಯ ಭಟ್ ಚನಿಲ ಕಾರ್ಯಕ್ರಮ ಸಂಯೋಜಿಸಿದರು. ಯಕ್ಷ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಂದ ಪೂರ್ವರಂಗ ಕುಣಿತ, ಬಾಲ ಕಲಾವಿದರಿಂದ ವೀರ ಬಬ್ರುವಾಹನ ಯಕ್ಷಗಾನ ಬಯಲಾಟ ಮತ್ತು ಪ್ರಸಿದ್ಧ ಕಲಾವಿದರಿಂದ ಗದಾಯುದ್ಧ-ರಕ್ತರಾತ್ರ ಬಯಲಾಟವು ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts