ವಿಟ್ಲ

ಶಂಭು ಶರ್ಮ ಅವರಿಗೆ ಯಕ್ಷಸಿಂಧೂರ ಪ್ರಶಸ್ತಿ ಪ್ರದಾನ

ಯಕ್ಷಗಾನ ಅವಿನಾಶಿ, ಅಮರ, ಚಿರಂತನ ಸ್ಫೂರ್ತಿಯ ಚಿಲುಮೆ ಎಂದು ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಗಂಗಾಧರ ಭಟ್ ಹೇಳಿದರು.

https://bantwalnews.comreport

ಜಾಹೀರಾತು

 ವಿಟ್ಲದಲ್ಲಿ ಯಕ್ಷಗಾನ ಬಯಲಾಟ ಅಕಾಡಮಿ ಬೆಂಗಳೂರು ಸಹಯೋಗದೊಂದಿಗೆ ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾದ ಯಕ್ಷ ಶಿಕ್ಷಣತರಬೇತಿ ಸಮಾರೋಪ ಸಮಾರಂಭ, ಯಕ್ಷ ಶಿಕ್ಷಣ ಪಡೆದ ವಿದ್ಯಾರ್ಥಿಗಳ ಬಯಲಾಟ, ಪ್ರಸಿದ್ಧ ಅರ್ಥಧಾರಿ ಶಂಭು ಶರ್ಮ ವರಿಗೆ ಯಕ್ಷ ಸಿಂಧೂರಪ್ರಶಸ್ತಿ ಪ್ರಧಾನ ಮತ್ತು ವಿಠಲ ಮಂದಿರದ ಅರ್ಚಕ ಕಲಾಭಿಮಾನಿ ರಾಮಮೂರ್ತಿ ಕೆದಿಲಾಯರಿಗೆ ಕಲಾ ಪೋಷಕ ಪುರಸ್ಕಾರಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

 ಬೆಂಗಳೂರು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿ ಸದಸ್ಯ ತಾರಾನಾಥ ಬಲ್ಯಾಯ, ಕಲಾವಿದ ರಾಧಾಕೃಷ್ಣ ಕಲ್ಚಾರ್, ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ದಿನೇಶ್ ಮಾಮೇಶ್ವರ ಭಾಗವಹಿಸಿದ್ದರು.

ವಿಟ್ಲ ಮಂಗೇಶ್ ಭಟ್ ಅಭಿನಂದನಾ ಭಾಷಣ ಮಾಡಿದರು. ಯಕ್ಷ ಸಿಂಧೂರ ಪ್ರತಿಷ್ಠಾನದ ಸಂಚಾಲಕ ಸಿ ಹೆಚ್ ಸುಬ್ರಹ್ಮಣ್ಯ ಭಟ್ ಚನಿಲ ಕಾರ್ಯಕ್ರಮ ಸಂಯೋಜಿಸಿದರು. ಯಕ್ಷ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಂದ ಪೂರ್ವರಂಗ ಕುಣಿತ, ಬಾಲ ಕಲಾವಿದರಿಂದ ವೀರ ಬಬ್ರುವಾಹನ ಯಕ್ಷಗಾನ ಬಯಲಾಟ ಮತ್ತು ಪ್ರಸಿದ್ಧ ಕಲಾವಿದರಿಂದ ಗದಾಯುದ್ಧ-ರಕ್ತರಾತ್ರ ಬಯಲಾಟವು ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ