ಸೌತಡ್ಕ ದೇವಳದಲ್ಲಿ ನಾಲ್ಕು ಗೋವುಗಳ ಕಳವು

 bantwalnews.com report

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಕಳವು ಜಾಲ ನಿಧಾನವಾಗಿ ಮತ್ತೆ ಸಕ್ರಿಯವಾಗುತ್ತಿದೆಯೇ?

ಕಳೆದ ಕೆಲ ದಿನಗಳ ಹಿಂದೆ ಸಾಲೆತ್ತೂರು, ಮಂಗಳವಾರ ರಾತ್ರಿ ಸೌತಡ್ಕದಲ್ಲಿ ಗೋವುಗಳನ್ನು ಕದ್ದೊಯ್ದ ಪ್ರಕರಣ ಇದಕ್ಕೆ ಇಂಬು ನೀಡುವಂತಿದೆ.

ಜಾಹೀರಾತು

ಮಂಗಳವಾರ ರಾತ್ರಿ ಪ್ರಸಿದ್ಧ ಕ್ಷೇತ್ರ ಸೌತಡ್ಕ ಗೋಶಾಲೆಯಿಂದ ನಾಲ್ಕು ಗೋವುಗಳನ್ನು ಕಳವು ಮಾಡಲಾಗಿದೆ.

ಚಿತ್ರ: ಸಾಂದರ್ಭಿಕ ಕೃಪೆ: ಇಂಟರ್ ನೆಟ್

ಮಂಗಳವಾರ ರಾತ್ರಿ ಸುಮಾರು 2 ಗಂಟೆಯ ಬಳಿಕ ಗೋಶಾಲೆಗೆ ನುಗ್ಗಿದ ಕಳ್ಳರು, ಮೂರು ಗಬ್ಬದ ದನ, ಒಂದು ಹೋರಿ ಕರುವನ್ನು ವಾಹನದಲ್ಲಿ ಹಾಕಿಕೊಂಡು ಹೋಗಿದ್ದಾರೆ. ಕಳೆದ ವರ್ಷ ಜನವರಿ 5ರಂದು ಇದೇ ರೀತಿ ದನಗಳನ್ನು ಕದ್ದುಕೊಂಡು ಹೋಗಲಾಗಿತ್ತು. ಸರಿಯಾಗಿ ಒಂದು ವರ್ಷ ಕಳೆದು ಹತ್ತು ದಿನಗಳಾದ ಬಳಿಕ ಮತ್ತೊಂದು ಕಳವು ಕೃತ್ಯ ನಾಗರಿಕರನ್ನು ಬೆಚ್ಚಿಬೀಳಿಸಿದೆ.

ಸೌತಡ್ಕ ದೇವಸ್ಥಾನ ಬಯಲು ಆಲಯವೆಂದೇ ಹೆಸರುವಾಸಿ. ಇಲ್ಲಿನ ಗಣಪತಿ ದೇವರನ್ನು ದರ್ಶನ ಮಾಡಲು ಊರ, ಪರವೂರಿನಿಂದ ಆಸ್ತಿಕರು ಆಗಮಿಸುತ್ತಾರೆ. ಇಲ್ಲಿ ಹಸುಗಳನ್ನು ಸಾಕಲೆಂದೇ ಗೋಶಾಲೆ ನಿರ್ಮಿಸಿ, ಕಳವು ಪ್ರಕರಣಗಳ ನಡೆಯದಂತೆ ರಕ್ಷಣೆಗಾಗಿ ಗನ್ ಮ್ಯಾನ್ ಗಳನ್ನೂ ನೇಮಿಸಲಾಗಿತ್ತು. ಸಿಸಿ ಕ್ಯಾಮರಾಗಳನ್ನೂ ಅಳವಡಿಸಲಾಗಿತ್ತು.

ಆದರೆ ಎರಡೂ ಸಿಸಿ ಕ್ಯಾಮರಾಗಳು ಕಾರ್ಯಾಚರಿಸುತ್ತಿಲ್ಲ ಹಾಗೂ ಗನ್ ಮ್ಯಾನ್ ಇದ್ದರೂ ಗೋಕಳ್ಳತನ ಅವರ ಅರಿವಿಗೆ ಬಂದಿಲ್ಲ ಎಂಬುದು ವಿಪರ್ಯಾಸ. ಎಂಧು ಸ್ಥಳೀಯರು bantwalnews.com ಗೆ ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ ದನಗಳನ್ನು ಕದ್ದೊಯ್ಯಲಾಗಿತ್ತು.

ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸೌತಡ್ಕ ದೇವಳದಲ್ಲಿ ನಾಲ್ಕು ಗೋವುಗಳ ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*