ವಿಟ್ಲ

ತ್ಯಾಜ್ಯ ಹಳ್ಳಕ್ಕೆ ಎಸೆದರೆ ನಿರ್ದಾಕ್ಷಿಣ್ಯ ಕ್ರಮ

ಮನೆ ನಿವೇಶನಗಳಲ್ಲಿ ಈಗಾಗಲೇ ಹಕ್ಕುಪತ್ರ ಹೊಂದಿದವರು ವಾಸ್ತವ್ಯವಿಲ್ಲದಿದ್ದರೆ ರದ್ದುಪಡಿಸಲಾಗುವುದು, ತ್ಯಾಜ್ಯಗಳನ್ನು ನದಿ, ಹಳ್ಳಗಳಿಗೆ ಎಸೆಯುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಳ್ನಾಡು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮಸಭೆಯಲ್ಲಿ ನಿರ್ಣಯಿಸಲಾಗಿದೆ.

www.bantwalnews.com report

ಜಾಹೀರಾತು

ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.

ಬಂಟ್ವಾಳ ತಾಲೂಕಿನ ಅತೀ ದೊಡ್ಡ ಗ್ರಾಮ ಕೊಳ್ನಾಡು. ಇದರ ಅಭಿವೃದ್ಧಿಗೆ ನಾಗರಿಕರ ಬೇಡಿಕೆಗೆ ಶೀಘ್ರ ಸ್ಪಂದನೆ ದೊರಕುತ್ತಿದೆ. ಆದರೆ ಸರಕಾರಿ ಸಾರಿಗೆ ವ್ಯವಸ್ಥೆ ಕೊರತೆ ಇದೆ. ಇದನ್ನು ನೀಗಿಸಬೇಕು ಎಂದು ಕೊಳ್ನಾಡು ಗ್ರಾಪಂ ಸಭಾಂಗಣಲ್ಲಿ ನಡೆದ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಬೇಡಿಕೆ ಬಂತು.

ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಪಂಚಾಯಿತಿಯಿಂದಲೇ ಉದ್ಯೋಗ ಖಾತರಿ ಯೋಜನೆಯ ಮೂಲಕ ಸುಮಾರು 35ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ, ಸುಮಾರು 10 ಲಕ್ಷ ವೆಚ್ಚದಲ್ಲಿ ಕಾಂಗ್ರೀಟ್ ಕಾಲು ದಾರಿ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಕೋಜುಗುಳಿ ಮಂಕುಡೆ ರಸ್ತೆ 2 ಕಿಲೋ ಮೀಟರ್, ಮದಕ – ತಾಳಿತ್ತನೂಜಿ -ಬೋಳಂತೂರು 5 ಕಿಲೋ ಮೀಟರ್, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ, 5 ಕೋಟಿ ಅನುದಾನದಲ್ಲಿ ನೆಕ್ಕರೆಕಾಡು ಸೇತುವೆ ಸಿಆರ್‌ಎಫ್ ನಿಧಿಯಲ್ಲಿ ಅನುಷ್ಠಾನಗೊಳ್ಳಲಿದೆ. ಸಾರಿಗೆ ವ್ಯವಸ್ಥೆ ಬಗ್ಗೆ ನಾಗರಿಕರ ಬೇಡಿಕೆಯನ್ನು ಈಡೇರಿಸುವಲ್ಲಿ ಸಂಬಂಧಪಟ್ಟವರ ಗಮನಕ್ಕೆ ತಂದು ಪ್ರಾಮಾಣಿಕ ಪ್ರಯತ್ನ ಮಾಡಲು ಬದ್ಧರಿದ್ದೇವೆ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 1.26 ಕೋಟಿ ರೂಪಾಯಿ ಗ್ರಾಮಸ್ಥರ ಸಹಕಾರದಿಂದ ಖರ್ಚು ಮಾಡಿ ಜಿಲ್ಲೆಯಲ್ಲೇ ನಮ್ಮ ಗ್ರಾಮ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು.

ಕುರ್ನಾಡು ಪಶು ಸಂಗೋಪನಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಕಾಶ್ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷೆ ಯಮುನಾ ಲಕ್ಷ್ಮಣ ಗೌಡ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಪಂಚಾಯಿತಿ ಸಿಬ್ಬಂದಿ ಸೌಮ್ಯ ನಾಡಗೀತೆ ಹಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಕೆ ಎ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ರಮೇಶ್ ವರದಿ ವಾಚಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts