ಶಿಷ್ಯನ ಭಾಗವತಿಕೆಗೆ ಗುರುವಿನ ಚೆಂಡೆ

ಒಂದು ಸ್ಮರಣೀಯ ಕ್ಷಣಕ್ಕೆ ಬಂಟ್ವಾಳ ತಾಲೂಕಿನ ಗಡಿ ಭಾಗವಾದ ತಾಳ್ತಜೆ ಸಾಕ್ಷಿಯಾಯಿತು. ಶಿಷ್ಯ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗುರು ಮಾಂಬಾಡಿ ಸಾಥ್ ನೀಡಿದ್ದು ಅಪರೂಪದ ಕ್ಷಣಗಳಲ್ಲಿ ಒಂದಾಗಿ ದಾಖಲಾಯಿತು.

www.bantwalnews.com report

ಜಾಹೀರಾತು

ತಾಳ್ತಜೆ ಸುಬ್ರಾಯ ಭಟ್ ಪ್ರತಿಷ್ಠಾನದ ವತಿಯಿಂದ 2016-17ನೇ ಸಾಲಿನ ಯಕ್ಷ ಪ್ರಶಸ್ತಿ ಈ ಬಾರಿ ತೆಂಕುತಿಟ್ಟಿನ ಸ್ಟಾರ್ ಭಾಗವತ ಎಂದೇ ಖ್ಯಾತರಾದ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ, ಮದ್ದಳೆಗಾರ ಪದ್ಮನಾಭ ಉಪಾಧ್ಯಾಯ ಅವರಿಗೆ ಪ್ರದಾನ ಮಾಡಿ ಸನ್ಮಾನಿಸಲಾಗಿತ್ತು. ಗುರುವಾರ ನಡೆದ  ಕಾರ್ಯಕ್ರಮಕ್ಕೂ ಮುನ್ನ ಕೃಷ್ಣ ಸಂಧಾನ, ಬಳಕ ಭೀಷ್ಮವಿಜಯ ತಾಳಮದ್ದಳೆ ನಡೆಯಿತು.

ಈ ಸಂದರ್ಭ ಪಟ್ಲ ಸತೀಶ ಶೆಟ್ಟಿ ಭಾಗವತಿಕೆಗೆ ಅವರ ಗುರುಗಳಾದ ಪ್ರಸಿದ್ಧ ಹಿಮ್ಮೇಳ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಚೆಂಡೆ ನುಡಿಸುವ ಮೂಲಕ ಗಮನ ಸೆಳೆದರು. ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯಾಯರು ಸಹಕರಿಸಿದರು. ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರು ವೇದಿಕೆಯಲ್ಲಿ ಕಾರ್ಯಕ್ರಮ ನೀಡುವುದು ಇತ್ತೀಚಿನ ದಿನಗಳಲ್ಲಿ ವಿರಳ. ಹೀಗಾಗಿ ಶಿಷ್ಯ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಗುರು ಮಾಂಬಾಡಿ ಸಾಥ್ ನೀಡಿದ್ದು ಅಪರೂಪದ ಕ್ಷಣಗಳಲ್ಲಿ ಒಂದಾಗಿ ದಾಖಲಾಯಿತು. ಇದು ಸೇರಿದ್ದ ಅಪಾರ ಪ್ರೇಕ್ಷಕರಿಗೂ ರಸಾನುಭೂತಿಯನ್ನು ನೀಡಿತು. ತಾಳ್ತಜೆ ಶಂಕರನಾರಾಯಣ ಭಟ್ ಕಾರ್ಯಕ್ರಮದ ಆಯೋಜಕರಾಗಿದ್ದರು.

ಈ ರಸಮಯ ಕ್ಷಣಗಳಿಗೆ ಹಿರಿಯ ಭಾಗವತ ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ಸಾಕ್ಷಿಯಾದರು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಿಷ್ಯನ ಭಾಗವತಿಕೆಗೆ ಗುರುವಿನ ಚೆಂಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*