ಆಡಳಿತ ನಿರ್ವಹಣೆ: ಯುಜಿಸಿ ಪ್ರಾಯೋಜಿತ ಕಾರ್ಯಾಗಾರ

ಕಚೇರಿ ಕೆಲಸಗಳಲ್ಲಿ ಕ್ರೀಯಾಶೀಲತೆ, ಬುದ್ಧಿವಂತಿಕೆ ಮತ್ತು ಆಧುನಿಕ ತಂತ್ರಾಂಶಗಳ ಅಳವಡಿಕೆ ಅನಿವಾರ್‍ಯ ಎಂದು ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಲಯದ ಸಹಾಯಕ ನಿರ್ದೇಶಕ ಎಂ. ಪಾಲ್ ಸ್ವಾಮಿ ಹೇಳಿದರು.

www.bantwalnews.com report

ಜಾಹೀರಾತು

ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ಡೆವಲಪ್ಪಿಂಗ್ ಎಡ್ವಾನ್ಸ್‌ಡ್ ಸ್ಕಿಲ್ಸ್ ಪಾರ್ ಎಡ್‌ಮಿನಿಸ್ಟ್ರೇಟಿವ್ ಸ್ಟಾಫ್ ಎಂಬ ವಿಷಯದ ಕುರಿತು ನಡೆದ ಯು.ಜಿ.ಸಿ ಪ್ರಾಯೋಜಿತ ಒಂದು ದಿನದ ವಿ.ವಿ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ಲೆಕ್ಕ್ಕಾ ಧಿಕಾರಿಯಾದ ಗಣೇಶ್ ನಾಯಕ್‌ ಮಾತನಾಡಿ ಆಧುನಿಕ ತಂತ್ರಜ್ಞಾನದ ಬೆಳವಣಿಗೆಗಳನ್ನು ತಿಳಿದುಕೊಂಡು ಕೆಲಸ ನಿರ್ವಹಿಸಬೇಕು ಎಂದರು.

ಇನ್ನೋರ್ವ ಅತಿಥಿ ಖಾಸಗಿ ಮತ್ತು ಅನುದಾನಿತ ಕಾಲೇಜುಗಳ ಆಡಳಿತಾತ್ಮಕ ಸಂಘದ ಅಧ್ಯಕ್ಷ ವಿಕ್ಟೋರಿಯನ್ ಫೆರ್ನಾಂಡಿಸ್ ಮಾತನಾಡಿ ಕಚೇರಿ ಎನ್ನುವುದು ದೇಹದ ಹೃದಯವಿದ್ದಂತೆ. ಹೃದಯ ಸರಿ ಇದ್ದರೆ ದೇಹ ಸುಸೂತ್ರವಾಗಿ ಕಾರ್ಯ ನಿರ್ವಹಿಸುತ್ತದೆ. ಕಚೇರಿ ಕಾರ್ಯನಿರ್ವಹಣೆ ಸುಲಲಿತವಾದಾಗ ಸಂಸ್ಥೆಯು ಗಟ್ಟಿಯಾಗಿ ನಿಲ್ಲಲು ಸಾಧ್ಯ ಎಂದರು.

ಜಾಹೀರಾತು

ಆಧ್ಯಕ್ಷತೆ ವಹಿಸಿದ್ದ ಬಂಟ್ವಾಳದ ಎಸ್.ವಿ.ಎಸ್ ಕಾಲೇಜುಗಳ ಸಂಚಾಲಕರಾದ ಕೂಡಿಗೆ ಪ್ರಕಾಶ್ ಶೆಣೈ ಮಾತನಾಡಿ ಇಂತಹ ಕಾರ್ಯಾಗಾರಗಳು ಆಡಳಿತಾತ್ಮಕ ಸಿಬ್ಬಂದಿಗಳಿಗೆ ಹೆಚ್ಚು ಪರಿಣಾಮಕಾರಿಯಾದುದು. ಇದಕ್ಕೆ ಆಡಳಿತ ಮಂಡಳಿಯು ನಿರಂತರ ಸಹಕಾರವನ್ನು ನೀಡುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್‌ರವರು ಅತಿಥಿಗಳನ್ನು ಪರಿಚಯಿಸಿ, ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಗಾರದ ಸಂಯೋಜಕರಾದ ರಾಧೇಶ್ ಕುಮಾರ್‌ರವರು ವಂದಿಸಿದರು. ಕಚೇರಿ ಸಹಾಯಕರಾದ ರೂಪಾ ಕೃಷ್ಣ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪ್ರಗತಿ ಮತ್ತು ಗಾಯನ ಪ್ರಭು ಪ್ರಾರ್ಥಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಡಳಿತ ನಿರ್ವಹಣೆ: ಯುಜಿಸಿ ಪ್ರಾಯೋಜಿತ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*