ವಿಟ್ಲ

ವಿಟ್ಲದಲ್ಲಿ ವೈಭವದ ರಥೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ನಡೆಯುವ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಶನಿವಾರ ರಾತ್ರಿ ವೈಭವದ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖ ನಡೆಯಿತು.

pic: Shilpi studio, Vitla

www.bantwalnews.com report

ವಿಟ್ಲ ಅರಮನೆಯ ಅನುವಂಶೀಯ ಆಡಳಿತದಾರರಾದ ವಿ.ಜನಾರ್ದನ ವರ್ಮ, ಕೃಷ್ಣಯ್ಯ ಕೆ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್. ಕುಡೂರು ಸೇರಿದಂತೆ ಹಲವು ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾದರು.

ಜಾಹೀರಾತು

ಜನವರಿ 14ರಂದು ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿತ್ತು. ಅಂದು ಧ್ವಜಾರೋಹಣದಿಂದ ಆರಂಭವಾಗಿ ಒಂಭತ್ತು ದಿನ ಉತ್ಸವಾದಿಗಳು ನಡೆದವು. 14ರಂದು ಶನಿವಾರ ಲಕ್ಷದೀಪೋತ್ಸವ , 15, 16, 17ರಂದು ಸಂಜೆ 6.30ಕ್ಕೆ ನಿತ್ಯೋತ್ಸವಗಳು

18ರಂದು ಬಯ್ಯದ ಬಲಿ ಉತ್ಸವ, 19ರಂದು ತೆಪ್ಪೋತ್ಸವ, 20ರಂದು ಹೂತೇರು ಉತ್ಸವ ನಡೆದಿದ್ದವು. ಪ್ರತಿದಿನ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜಾತ್ರೋತ್ಸವಕ್ಕೆ ಕಳೆಗಟ್ಟಿದ್ದವು..

ಭಾನುವಾರ ಅವಭೃತ ಸ್ನಾನ, 24ರಂದು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ. 25ರಂದು ಅರಮನೆಯಲ್ಲಿ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಬಳಿಕ ಕೇಪುವಿಗೆ ಭಂಡಾರ ಹೊರಡುವುದು ನಡೆಯಲಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts