ವಿಟ್ಲ

ವಿಟ್ಲದಲ್ಲಿ ವೈಭವದ ರಥೋತ್ಸವ

ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ನಡೆಯುವ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ ಶನಿವಾರ ರಾತ್ರಿ ವೈಭವದ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖ ನಡೆಯಿತು.

pic: Shilpi studio, Vitla

www.bantwalnews.com report

ವಿಟ್ಲ ಅರಮನೆಯ ಅನುವಂಶೀಯ ಆಡಳಿತದಾರರಾದ ವಿ.ಜನಾರ್ದನ ವರ್ಮ, ಕೃಷ್ಣಯ್ಯ ಕೆ., ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್.ಎನ್. ಕುಡೂರು ಸೇರಿದಂತೆ ಹಲವು ಗಣ್ಯರು ಈ ಸಂಭ್ರಮಕ್ಕೆ ಸಾಕ್ಷಿಯಾದರು.

ಜಾಹೀರಾತು

ಜನವರಿ 14ರಂದು ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿತ್ತು. ಅಂದು ಧ್ವಜಾರೋಹಣದಿಂದ ಆರಂಭವಾಗಿ ಒಂಭತ್ತು ದಿನ ಉತ್ಸವಾದಿಗಳು ನಡೆದವು. 14ರಂದು ಶನಿವಾರ ಲಕ್ಷದೀಪೋತ್ಸವ , 15, 16, 17ರಂದು ಸಂಜೆ 6.30ಕ್ಕೆ ನಿತ್ಯೋತ್ಸವಗಳು

18ರಂದು ಬಯ್ಯದ ಬಲಿ ಉತ್ಸವ, 19ರಂದು ತೆಪ್ಪೋತ್ಸವ, 20ರಂದು ಹೂತೇರು ಉತ್ಸವ ನಡೆದಿದ್ದವು. ಪ್ರತಿದಿನ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜಾತ್ರೋತ್ಸವಕ್ಕೆ ಕಳೆಗಟ್ಟಿದ್ದವು..

ಭಾನುವಾರ ಅವಭೃತ ಸ್ನಾನ, 24ರಂದು ಕೇಪುವಿನ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ. 25ರಂದು ಅರಮನೆಯಲ್ಲಿ ಶ್ರೀ ಮಲರಾಯ ದೈವಕ್ಕೆ ನೇಮೋತ್ಸವ ಬಳಿಕ ಕೇಪುವಿಗೆ ಭಂಡಾರ ಹೊರಡುವುದು ನಡೆಯಲಿದೆ.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ