ವಿಟ್ಲ

ವಿಟ್ಲೋತ್ಸವದಲ್ಲಿ ಗಮನ ಸೆಳೆದ ಸಂಗೀತ ರಸಮಂಜರಿ

ವಿಟ್ಲ ಶ್ರೀ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಪ್ರಯುಕ್ತ ನಡೆದ ವಿ.ಆರ್.ಸಿ ವಿಟ್ಲ ವತಿಯಿಂದ ರಮಾನಾಥ ವಿಟ್ಲ ಸಾರಥ್ಯದಲ್ಲಿ ನಡೆದ ವಿಟ್ಲೋತ್ಸವ ಕಾರ್ಯಕ್ರಮದಲ್ಲಿ ವಾಯ್ಸ್ ಆಫ್ ಮ್ಯೂಸಿಕ್ ಮಂಗಳೂರು ಇದರ ರಾಜೇಶ್ ಮತ್ತು ಬಳಗದ ನಡೆಸಿಕೊಟ್ಟ ಸಂಗೀತ ರಸ ಮಂಜರಿ ಪ್ರೇಕ್ಷಕರ ಗಮನ ಸೆಳೆಯಿತು.

ಸಭಾ ಕಾರ್ಯಕ್ರಮದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಿವೃತ್ತ ಅರ್ಚಕ ವಾಸುದೇವ ಕೆದಿಲಾಯ ಹಾಗೂ ದೇವಸ್ಥಾನದ ಸ್ವಯಂ ಸೇವಕ ರಾಜೇಶ್ ಬೊಬ್ಬೆಕೇರಿ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿ ರವೀಶ್ ಸಿ.ಆರ್ ಮಾತನಾಡಿ ಸಮಯಗಳನ್ನು ಒಳ್ಳೆಯ ಕಾರ್ಯಗಳಿಗೆ ಮೀಸಲಿಟ್ಟಾಗ ಹಾಗೂ ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವ ಬೆಳೆಸಿದಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಶುಭ ಹಾರೈಸಿದರು.

ವಿಟ್ಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಅನಂತಕೃಷ್ಣ ಹೆಬ್ಬಾರ್ ಮಾತನಾಡಿ ವಿಟ್ಲ ಜಾತ್ರೋತ್ಸವ ವೇಳೆ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ ಕಾರ್ಯಗಳಿಂದಾಗಿ ವಿಟ್ಲ ಜಾತ್ರೆ ಪ್ರಸಿದ್ಧಿ ಪಡೆದಿದೆ ಎಂದು ತಿಳಿಸಿದರು.

ನಿವೃತ್ತ ಕಮಾಟೆಂಟ್ ಚಂದಪ್ಪ ಮೂಲ್ಯ, ರಮಾನಾಥ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ನಟೇಶ್ ವಿಟ್ಲ ನಿರೂಪಿಸಿ, ಸ್ವಾಗತಿಸಿದರು. ಅಶೋಕ್ ವಿಟ್ಲ ಸಹಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ