ಕಾರು ಅಡ್ಡಗಟ್ಟಿ 5 ಲಕ್ಷ ರೂ ದರೋಡೆ

ಸುಳ್ಯ ತಾಲೂಕಿನ ಐವರ್ನಾಡು ಎಂಬಲ್ಲಿ ಸೋಮವಾರ ಬೆಳಗ್ಗೆ ವ್ಯಾಪಾರಿಯೊಬ್ಬರಿಗೆ ಪಿಸ್ತೂಲು ತಲವಾರು ತೋರಿಸಿ ಐದು ಲಕ್ಷ ರೂ ನಗದು, ಮೊಬೈಲ್ ಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ.

www.banwalnews.com report

ಗುತ್ತಿಗಾರಿನ ಅಡಿಕೆ ವ್ಯಾಪಾರಿ ಪ್ರಗತಿ ಅಬ್ದುಲ್ ಖಾದರ್ ಎಂಬವರು ಇಂದು ಬೆಳಿಗ್ಗೆ ಬೆಳ್ಳಾರೆಯಿಂದ ಗುತ್ತಿಗಾರಿಗೆ ಬರುತ್ತಿದ್ದಾಗ ಐವರ್ನಾಡಿನಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ಸುಮಾರು ಐವರು ದುಷ್ಕರ್ಮಿಗಳು ಪಿಸ್ತೂಲ್, ತಲವಾರು ತೋರಿಸಿ ಕಾರಲ್ಲಿದ್ದ 5 ಲಕ್ಷ ರೂ ನಗದು ಹಾಗೂ ಮೊಬೈಲ್‌ಗಳನ್ನು ದೋಚಿ ದರು.

ಜಾಹೀರಾತು

ಅಡಿಕೆ ವ್ಯಾಪಾರಿ ಅಬ್ದುಲ್ ಖಾದರ್ ರವರು ತನ್ನ ಮಿತ್ರ ಮತ್ತು ಕೆಲಸದ ಇಬ್ಬರೊಂದಿಗೆ ಬೆಳ್ಳಾರೆಯಿಂದ ಗುತ್ತಿಗಾರಿಗೆ ತನ್ನ ಕಾರಲ್ಲಿ ಹೊರಟಿದ್ದರು. ಕಾರು ಐವರ್ನಾಡು ತಲುಪುವ ವೇಳೆ ಹಿಂದಿನಿಂದ ಹಿಂಬಾಲಿಸಿಕೊಂಡು ಬಂದ ಕಾರೊಂದು ಇವರ ಕಾರಿನ ಮುಂದೆ ಹೋಗಿ ಅಡ್ಡ ನಿಂತಿತು. ಅದರಿಂದ ಇಳಿದವರು ಪಿಸ್ತೂಲ್ ಮತ್ತು ತಲವಾರು ತೋರಿಸಿ ಕಾರಲ್ಲಿದ್ದ ನಗದು, ಚೆಕ್ ಬುಕ್, ಮೊಬೈಲ್‌ಗಳನ್ನು ಕಿತ್ತುಕೊಂಡು ಬೆಳ್ಳಾರೆ ಕಡೆಗೆ ಹೋಗಿದ್ದಾರೆ ಎಂದು ಹೇಳಲಾಗಿದೆ. ವಿಷಯ ತಿಳಿದ ಸುಳ್ಯ ಪೋಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಜಿಲ್ಲಾ ಎಸ್ಪಿ ಭೂಷಣ್ ಬೊರಸೆ ಅವರು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲು ಸೂಚಿಸಿದ್ದಾರೆ. ಆಗಂತುಕರು ಹಿಂದಿ ಮಾತನಾಡುತ್ತಿದ್ದರು ಎಂದು ಹೇಳಲಾಗಿದ್ದು, ತನಿಖೆ ಸಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾರು ಅಡ್ಡಗಟ್ಟಿ 5 ಲಕ್ಷ ರೂ ದರೋಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*