ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ

4.5 ಮೀಟರ್ ನೀರು ಸಂಗ್ರಹಿಸಿದಾಗ ಮುಳುಗಡೆಯಾಗುವ ಪ್ರದೇಶಕ್ಕೆ ಈ ವರ್ಷವೇ ನ್ಯಾಯೋಚಿತ ಪರಿಹಾರ. 5 ಮೀಟರ್ ನೀರು ಸಂಗ್ರಹಿಸಿದ ಸಂದರ್ಭ ಸಂತ್ರಸ್ತ ರೈತರಿಗೆ ಅದೇ ವರ್ಷ ಶಾಶ್ವತ ಪರಿಹಾರ.

www.bantwalnews.com report

ಜಾಹೀರಾತು

ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಸಮ್ಮುಖ ಅರಣ್ಯ ಸಚಿವ ಬಿ.ರಮಾನಾಥ ರೈ ಜೊತೆ ತೆರಳಿದ ನಿಯೋಗಕ್ಕೆ ಈ ಭರವಸೆ ನೀಡಲಾಗಿದೆ.

ತುಂಬೆ ನೂತನ ವೆಂಟೆಡ್ ಡ್ಯಾಂನಲ್ಲಿ ಸಂಗ್ರಹಿಸುವ ನೀರಿನಿಂದ ಒಟ್ಟು 488 ಎಕ್ರೆ ಜಮೀನು ಮುಳುಗಡೆಯಾಗುವ ಬಗ್ಗೆ ಈಗಾಗಲೇ ಸರ್ವೆ ನಡೆಸಲಾಗಿದ್ದು, ಈ ಜಮೀನುಗಳ ಸಂತ್ರಸ್ತರಿಗೆ ಒಟ್ಟು ಪರಿಹಾರ ಮೊತ್ತ 125 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಪರಿಹಾರ ಮೊತ್ತವನ್ನು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಹಣಕಾಸು ಇಲಾಖೆ ಜಂಟಿಯಾಗಿ ಠೇವಣಿ ಇಟ್ಟು ವಿತರಿಸುವುದು ಎಂಬ ತೀರ್ಮಾನಕ್ಕೂ ಸಭೆಯಲ್ಲಿ ಬರಲಾಗಿದೆ.

ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ ಕುಂಟಿ, ನಗರಾಭಿವೃದ್ದಿ ಇಲಾಖೆ ಅಪರ ಕಾರ್ಯದರ್ಶಿ ಪೊನ್ನುರಾಜ್, ಹಣಕಾಸು ಯೋಜನೆ ಇಲಾಖೆ ಕಾರ್ಯದರ್ಶಿ ಅರವಿಂದ ಶ್ರೀವಾಸ್ತವ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಮಣ ರೆಡ್ಡಿ, ರಾಜ್ಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಪದನಿಮಿತ್ತ ಆಯುಕ್ತ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶಕ ಶಿವಸ್ವಾಮಿ ಕಳಸದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಜಗದೀಶ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ಕಾರ್ಯನಿರ್ವಾಹಕ ಇಂಜಿನಿಯರ್ ಮಳವಳ್ಳಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು.

ಜಾಹೀರಾತು

ಸಂತ್ರಸ್ತ ರೈತರ ಪರವಾಗಿ ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸಜಿಪಮುನ್ನೂರು ಗ್ರಾ ಪಂ ಸದಸ್ಯರಾದ ಯೂಸುಫ್ ಕರಂದಾಡಿ, ಅಹ್ಮದ್ ಕಬೀರ್, ಗ್ರಾ ಪಂ ಮಾಜಿ ಅಧ್ಯಕ್ಷ ಎಂ ಪರಮೇಶ್ವರ, ಸಂತ್ರಸ್ತ ರೈತರಾದ ಇಕ್ಬಾಲ್ ಪಡ್ಪು, ಕೆ ಎಂ ಅಬ್ದುಲ್ ರಹಿಮಾನ್ ಉದ್ದೋಟ್ಟು, ಆದಂ ಬಾಳಿಕೆ, ಧನಂಜಯ ಶೆಟ್ಟಿ ಪರಾರಿ, ಮುಹಮ್ಮದ್ ರಫೀಕ್ ಕರಂದಾಡಿ, ಹಸನಬ್ಬ ಉದ್ದೊಟ್ಟು, ಅಬ್ದುಲ್ ಕರೀಂ ಮೊದಲಾದವರು ಉಸ್ತುವಾರಿ ಸಚಿವರ ನಿಯೋಗದಲ್ಲಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಂಬೆ ಡ್ಯಾಂ ಸಂತ್ರಸ್ತ ರೈತರಿಗೆ ನ್ಯಾಯೋಚಿತ ಪರಿಹಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*