ವಿಟ್ಲ

ಕರೋಪಾಡಿಯಲ್ಲಿ ಮನೆಯವರ ಕಟ್ಟಿಹಾಕಿ ನಿಧಿಶೋಧ

  • ಮಂಗಳವಾರ ಬೆಳಗ್ಗೆ ನಡೆದ ಘಟನೆ
  • ಸ್ಥಳಕ್ಕೆ ವಿಟ್ಲ ಪೊಲೀಸರ ದೌಡು
  • ಮನೆ ಪಕ್ಕ ಹೊಂಡ ಮಾಡಿ ನಿಧಿಗಾಗಿ ಶೋಧ

www.bantwalnews.com report

ಬಂಟ್ವಾಳ ತಾಲೂಕಿನ ಗಡಿ ಭಾಗವಾದ ಕರೋಪಾಡಿಯ ಅರಸಳಿಕೆಯ ವಿಘ್ನರಾಜ ಭಟ್ ಎಂಬವರ ಮನೆಗೆ ಮಂಗಳವಾರ ಬೆಳಗ್ಗೆ ಸುಮಾರು 2ರಿಂದ 4ಗಂಟೆಯ ವೇಳೆಗೆ ಸುಮಾರು 9ರಷ್ಟಿದ್ದ ತಂಡ ನುಗ್ಗಿ ಮನೆಯವರನ್ನು ಬೆದರಿಸಿ, ನಿಧಿ ಶೋಧ ಮಾಡಿದೆ.

ಜಾಹೀರಾತು

ಸುಮಾರು 20ರಿಂದ 35 ವರ್ಷದೊಳಗಿನವರಿದ್ದ ಈ ತಂಡದಲ್ಲಿ 9 ಮಂದಿ ಇದ್ದರು. ಮನೆಯಲ್ಲಿ ವಿಘ್ನರಾಜ ಭಟ್ ಮತ್ತು ಅವರ ಅಳಿಯ ಮಾತ್ರವೇ ಇದ್ದ ಸಂದರ್ಭ ಅವರಿಬ್ಬರನ್ನು ಕಟ್ಟಿ ಹಾಕಿ, ನಿಧಿ ಎಲ್ಲಿದೆ ಎಂದು ಕೇಳಿದರು. ಬಳಿಕ ಮನೆಯ ಪಕ್ಕದಲ್ಲಿ ಹೊಂಡ ಮಾಡಿ ಅಗೆದು ನಿಧಿಗಾಗಿ ಹುಡುಕಿ ಬರಿಗೈಯಲ್ಲಿ ಮರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಮಾಹಿತಿ ದೊರಕಿದ ತಕ್ಷಣ ವಿಟ್ಲ ಪಿಎಸ್ ಐ ನಾಗರಾಜ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸೂಕ್ತ ಬಂದೋಬಸ್ತ್ ಕೈಗೊಂಡರು.

ಇನ್ನೋವಾ ಕಾರಿನಲ್ಲಿ ಬಂದಿದ್ದ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ