ವಿಟ್ಲ

ಮಾನವ ಸರಪಳಿ ಯಶಸ್ವಿಗೊಳಿಸಲು ಎಸ್ ಕೆಎಸ್ಎಸ್ಎಫ್ ಕರೆ

ದಕ್ಷಿಣ ಕನ್ನಡ ಜಿಲ್ಲಾ ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ಜ.26 ರಂದು ಉಪ್ಪಿನಂಗಡಿಯಲ್ಲಿ ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ವಿಟ್ಲ ವಲಯ ಎಸ್.ಕೆ.ಎಸ್.ಎಸ್.ಎಫ್ ಪ್ರಧಾನ ಕಾರ್ಯದರ್ಶಿ ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್ ಕರೆ ನೀಡಿದ್ದಾರೆ.

ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ಧ್ಯೇಯ ವಾಕ್ಯದಡಿ ಪ್ರತಿವರ್ಷ ಜ.26 ಪ್ರಜಾಪ್ರಭುತ್ವ ದಿನವನ್ನು ಮಾನವ ಸರಪಳಿ ಎಂಬ ವಿಶಿಷ್ಟ ಕಾರ್ಯಕ್ರಮದ ಮೂಲಕ ಎಸ್.ಕೆ.ಎಸ್.ಎಸ್.ಎಫ್ ವಿವಿಧ ಕೇಂದ್ರಗಳಲ್ಲಿ ಆಚರಿಸಿಕೊಂಡು ಬರುತ್ತಿದೆ. ಈ ಕಾರ್ಯಕ್ರಮವನ್ನು ಈ ಬಾರಿ ಉಪ್ಪಿನಂಗಡಿಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲಾರೂ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಎಸ್‌ವೈಎಸ್ ಕೇಂದ್ರ ಸಮಿತಿಯ ಪಿ.ಎಂ ಅಬ್ದುಲ್ ಹಕೀಂ, ಎಸ್.ಕೆ.ಎಸ್.ಎಸ್.ಎಫ್ ವಿಟ್ಲ ವಲಯಾಧ್ಯಕ್ಷ ಅಶ್ರಫ್ ಕಬಕ, ಶಮೀರ್ ಪಳಿಕೆ, ವಿ.ಎಸ್ ಇಬ್ರಾಹಿಂ ಒಕ್ಕೆತ್ತೂರು, ವಿಟ್ಲ ಕ್ಲಸ್ಟರ್ ಅಧ್ಯಕ್ಷ ಇಬ್ರಾಹಿಂ ಝೈನಿ ಮೊದಲಾದವರು ಉಪಸ್ಥಿತರಿದ್ದರು.

AddThis Website Tools
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ